Advertisement

ಉಗ್ರಪ್ಪ ಆರೋಪಕ್ಕೆ ಸಿಎಂ ಗರಂ

06:25 AM Jul 01, 2018 | |

ಬೆಂಗಳೂರು: ಕಾವೇರಿ ಕುರಿತ ಸರ್ವಪಕ್ಷ ಸಭೆಯಲ್ಲಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹಾಗೂ ವಿಧಾನಪರಿಷತ್‌ ಸದಸ್ಯ ವಿ.ಎಸ್‌. ಉಗ್ರಪ್ಪ ನಡುವೆ ವಾಗ್ವಾದ ನಡೆಯಿತು ಎಂದು ಹೇಳಲಾಗಿದೆ.

Advertisement

ಉಗ್ರಪ್ಪ ಅವರು, ರಾಜ್ಯದ ಪರ ವಕೀಲರು ಸಮರ್ಥವಾಗಿವಾದ ಮಂಡಿಸದಿರುವುದು ಹಾಗೂ ಕಾಲ ಕಾಲಕ್ಕೆ ಸೂಕ್ತ ನಿರ್ಣಯ ಕೈಗೊಳ್ಳದಿರುವುದು ನಮಗೆ ಹಿನ್ನಡೆ ಉಂಟಾಗಲು ಕಾರಣ.

ಹೀಗಾಗಿ, ವಕೀಲರನ್ನು ಬದಲಾಯಿಸಿ ಎಂದು ಆಗ್ರಹಿಸಿದರು. ಇದಕ್ಕೆ ಗರಂ ಆದ ಎಚ್‌.ಡಿ.ಕುಮಾರಸ್ವಾಮಿ, ನಮ್ಮ ವಕೀಲರ ತಂಡದ ಆತ್ಮವಿಶ್ವಾಸ ಕುಗ್ಗಿಸುವ ಕೆಲಸ ಮಾಡುವುದು ಬೇಡ.

ನಾರಿಮನ್‌ ನೇತೃತ್ವದ ತಂಡ ಮೊದಲಿನಿಂದಲೂ ರಾಜ್ಯಕ್ಕೆ ನ್ಯಾಯ ಕೊಡಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ ಎಂದು ಸುಮ್ಮನಾಗಿಸಿದರು. ಸಭೆಯ ನಂತರ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಸಹ, ಯಾರೂ ಇಲ್ಲಿ ವೈಯಕ್ತಿಕವಾಗಿ ಮುಖ್ಯವಲ್ಲ. ರಾಜ್ಯದ ಹಿತಾಸಕ್ತಿ ಮುಖ್ಯ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕಿದೆ. ನಮ್ಮ ಅಧಿಕಾರಿಗಳು, ಕಾನೂನು ತಜ್ಞರು, ವಕೀಲರ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಅವರೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next