Advertisement

ಮೋದಿ ಹೇಳಿಕೆ ಕೀಳುಮಟ್ಟದ್ದು: ಉಗ್ರಪ್ಪ

06:08 AM Jan 14, 2019 | Team Udayavani |

ಹೊಸಪೇಟೆ: ಪ್ರಧಾನಿ ನರೇಂದ್ರ ಮೋದಿಯವರು ‘ಸಿ.ಎಂ.ಕುಮಾರಸ್ವಾಮಿ ಕಾಂಗ್ರೆಸ್‌ ಪಕ್ಷದ ಗುಮಾಸ್ತ’ ಎಂದು ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ರಾಜ್ಯದ ಮತದಾರರಿಗೆ ಅವಮಾನ ಮಾಡಿ¨್ದಾರೆಂದು ಸಂಸದ ವಿ.ಎಸ್‌. ಉಗ್ರಪ್ಪ ಹೇಳಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಹತಾಶರಾಗಿ ಈ ರೀತಿಯ ಹೇಳಿಕೆ ನೀಡಿ¨್ದಾರೆ. ಒಂದು ರಾಜ್ಯದ ಮುಖ್ಯಮಂತ್ರಿ ಬಗ್ಗೆ ಈ ರೀತಿ ಮಾತನಾಡಿ ಮೋದಿಯವರು ಸಂವಿಧಾನಕ್ಕೆ ಅಪಚಾರ ಮಾಡಿ¨್ದಾರೆ. ಕೂಡಲೇ ಅವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು. ಸಂವಿಧಾನದಲ್ಲಿನ ನಿಯಮಗಳಂತೆ ಕುಮಾರಸ್ವಾಮಿ ಯವರು ನಮ್ಮ ರಾಜ್ಯದ ಮುಖ್ಯಮಂತ್ರಿಗಳಾಗಿ¨್ದಾರೆ. ಅವರು ಯಾರ ಗುಲಾಮರೂ ಅಲ್ಲ. ಪ್ರಧಾನಿಯಾದವರು ಅವರ ಸ್ಥಾನಕ್ಕೆ ಗೌರವ ತರುವಂತೆ ಮಾತನಾಡಬೇಕು, ನಡೆದುಕೊಳ್ಳಬೇಕು ಎಂದು ಕಿಡಿ ಕಾರಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next