Advertisement
ಎರಡೂ ನದಿಗಳೀಗ ಬತ್ತಿದ್ದರಿಂದ ಎಲ್ಲೆಡೆ ಖಾಲಿ ಕೊಡಗಳ ಪ್ರದರ್ಶನ ಕಂಡುಬರುತ್ತಿದೆ. ಎರಡು ವರ್ಷದ ಮಗುವಿಗೆ ಕೋವಿಡ್ ಸೋಂಕು ದೃಢಪಟ್ಟ ಕಾರಣಕ್ಕೆ ನಗರದಲ್ಲಿ ಲಾಕ್ಡೌನ್ ಮತ್ತಷ್ಟು ಬಿಗಿಗೊಂಡಿದೆ. ಮನೆಯಲ್ಲಿರಬೇಕಾದ ಜನರು ಕೊಡಗಳೊಂದಿಗೆ ಬೀದಿಗೆ ಬಂದು ನೀರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಳಗಳ ಎದುರು ನೂರಾರು ಜನ ಮಹಿಳೆಯರು ಗುಂಪು ಸೇರುವ ಮೂಲಕ ಸಾಮಾಜಿಕ ಅಂತರ ನಿಯಮ ಧಿಕ್ಕರಿಸುತ್ತಿದ್ದಾರೆ. ನದಿಯಲ್ಲಿ ನೀರು ಕಡಿಮೆಯಾಗುತ್ತಿದ್ದಂತೆ ಪುರಸಭೆ ಅಧಿಕಾರಿಗಳು ಐದಾರು ದಿನಕ್ಕೊಮ್ಮೆ ಬಡಾವಣೆಗಳಿಗೆ ನೀರು ಸರಬರಾಜು ಮಾಡುತ್ತಿದ್ದಾರೆ. ಕಂಟೇನ್ಮೆಂಟ್ ಜೋನ್ ಪ್ರದೇಶಕ್ಕೆ ಒಳಪಟ್ಟಿರುವ ಪಿಲಕಮ್ಮಾ ದೇವಿ ಬಡಾವಣೆ, ಮಲ್ಲಿಕಾರ್ಜುನ ದೇವಸ್ಥಾನ ಬಡಾವಣೆ, ಕಲಕಮ್ ಏರಿಯಾ ಹೀಗೆ ಒಟ್ಟು ನಾಲ್ಕು ಬಡಾವಣೆಗಳಲ್ಲಿ ಜನರು ನೀರಿಗಾಗಿ ಪರಿತಪಿಸುತ್ತಿದ್ದಾರೆ.
Advertisement
ನೀರಿಗಾಗಿ ಬೀದಿಗಿಳಿದ ಜನ
12:38 PM May 03, 2020 | Naveen |