Advertisement

ವೇತನ ವಿಳಂಬ ಖಂಡಿಸಿ ಗುತ್ತಿಗೆ ನೌಕರರ ಧರಣಿ

12:04 PM Dec 13, 2019 | Team Udayavani |

ಕುಂದಗೋಳ: ವೇತನ ಪಾವತಿ ವಿಳಂಬ ಖಂಡಿಸಿ ತಾಲೂಕಾಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಿ ದರ್ಜೆ ಗುತ್ತಿಗೆದಾರರು ಗುರುವಾರ ತಮ್ಮ ಸೇವೆ ಸ್ಥಗಿತಗೊಳಿಸಿ ಆಸ್ಪತ್ರೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಿ ದರ್ಜೆ ನೌಕರರಿಗೆ ಕಳೆದ 4-5 ತಿಂಗಳಿನಿಂದ ವೇತನ ಬಾರದಿರುವುದರಿಂದ ಕುಟುಂಬ ನಿರ್ವಹಣೆ ಹೇಗೆ? ಮಾಡಬೇಕೆಂದು ದೋಚುತ್ತಿಲ್ಲ. ಇದರಿಂದ ಜೀವನ ನಡೆಸುವುದೇ ಕಷ್ಟಕರವಾಗಿದೆ. ಹೀಗಾಗಿ ಕೆಲಸಕ್ಕೆ ಹಾಜರಾಗದೇ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಬೇಕಾಗಿದೆ ಎಂದು ಗುತ್ತಿಗೆದಾರ ನೌಕರರು ತಿಳಿಸಿದರು.

ಪಪಂ ಸದಸ್ಯ ಮಲ್ಲಿಕಾರ್ಜುನ ಕಿರೇಸೂರ ಹೋರಾಟ ಬೆಂಬಲಿಸಿದ್ದರಿಂದ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿತು. ಇದನ್ನು ವೈದ್ಯಾಧಿಕಾರಿ ಭಾಗೀರಥಿ ಅವರು ಡಿಎಚ್‌ಒ ಗಮನಕ್ಕೆ ತಂದರು. ನಂತರ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಸಮಾಲೋಚನೆ ನಡೆಸಿದ ಡಿಎಚ್‌ಒ ಯಶವಂತ ಮದನಿಕರ, ಬೇಡಿಕೆ ಈಡೇರಿಸುವ ಆಶ್ವಾಸನೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು. ಈ ವೇಳೆ ಪಪಂ ಸದಸ್ಯ ಮಲ್ಲಿಕಾರ್ಜುನ ಕಿರೇಸೂರ ಮಾತನಾಡಿ, ಈ ಆಸ್ಪತ್ರೆಯನ್ನು 100 ಹಾಸಿಗೆ ಆಸ್ಪತ್ರೆಯನ್ನಾಗಿಸಿ ಅಂದಿನ ಆರೋಗ್ಯ ಸಚಿವ ರಮೇಶಕುಮಾರ ಉದ್ಘಾಟಿಸಿದ್ದರು. ಆದರೆ ಇದುವರೆಗೂ ಈ ಸೌಲಭ್ಯ ಕಲ್ಪಿಸಿಲ್ಲ. ಕೂಡಲೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಆಗ್ರಹಿಸಿದರು

Advertisement

Udayavani is now on Telegram. Click here to join our channel and stay updated with the latest news.

Next