Advertisement

ಕಾಂಗ್ರೆಸ್‌ನಲ್ಲಿ ಅತೃಪ್ತಿ ತಾಂಡವ,ಕಾದು ನೋಡಿ; ಭವಿಷ್ಯ ನುಡಿದ BSY

10:31 AM Dec 22, 2018 | Team Udayavani |

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೇಳಲಿದೆ.ಸಾಕಷ್ಟು ಬದಲಾವಣೆಗಳು ಆಗಲಿವೆ.  ಸಂಜೆಯವರೆಗೆ ಕಾದು ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

Advertisement

ಶನಿವಾರ ಸುದ್ದಿಗರರೊಂದಿಗೆ ಮಾತನಾಡಿದ ಬಿಎಸ್‌ವೈ  ರಮೇಶ್‌ ಜಾರಕಿಹೊಳಿ ಅವರನ್ನು ಸಚಿವ ಸಂಪುಟದಿಂದ ಕೈ ಬಿಟ್ಟಿರುವುದು ದೊಡ್ಡ ಪರಿಣಾಮ ಬೀರುತ್ತದೆ ಎಂದರು.

ಇಂದು ಪ್ರಮಾಣವಚನವಾಗುವುದೇ ಸಂಶಯ. ರಾಜ್ಯಪಾಲರು ಊರಲ್ಲಿ ಇಲ್ಲ ಎನ್ನುವ ಸುದ್ದಿ ಬಂದಿದೆ. ಆ ಬಗ್ಗೆ ನನಗೆ ಗೊತ್ತಿಲ್ಲ, ಸಂಜೆಯವರೆಗೆ ಕಾದು ನೋಡಬೇಕು ಎಂದರು.

ನಾವು 104 ಮಂದಿ ಶಾಸಕರು ವಿರೋಧಪಕ್ಷದಲ್ಲಿದ್ದು ಕಾದು ನೋಡುತ್ತೇವೆ. ಶಾಸಕಾಂಗ ಪಕ್ಷದ ಸಭೆ ಕರೆದು ವರಿಷ್ಠರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದರು. 

Advertisement
Advertisement

Udayavani is now on Telegram. Click here to join our channel and stay updated with the latest news.

Next