Advertisement

ಬಿಜೆಪಿ ಸೇರುವ ಬಗ್ಗೆ ಕಾದು ನೋಡಿ: ಬೇಗ್‌

12:29 AM May 25, 2019 | Team Udayavani |

ಬೆಂಗಳೂರು: ಲೋಕಸಭೆ ಚುನಾವಣೆಯ ಫ‌ಲಿತಾಂಶ ಬರುವ ಮೊದಲೇ ರಾಜ್ಯ ನಾಯಕರ ವಿರುದ್ಧ ಬಹಿರಂಗ ಆರೋಪ ಮಾಡಿದ್ದ ಮಾಜಿ ಸಚಿವ ರೋಷನ್‌ ಬೇಗ್‌, ಬಿಜೆಪಿ ಸೇರುವ ಬಗ್ಗೆ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದಾರೆ. ನಾಣ್ಯವನ್ನು ಮೇಲೆ ತೂರಿದ್ದೇನೆ, ಏನು ಬೀಳುತ್ತದೆಯೋ ಕಾದು ನೋಡಿ ಎಂದು ಹೇಳಿದ್ದಾರೆ.

Advertisement

ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಚುನಾವಣಾ ಫ‌ಲಿತಾಂಶಕ್ಕೂ ಎರಡು ದಿನ ಮುಂಚೆಯೇ ನಾನು ಭವಿಷ್ಯ ಹೇಳಿದ್ದೆ. ಅದು ನಿಜವಾಯಿತು. ಚುನಾವಣೆ ಸಂದರ್ಭದಲ್ಲಿ ಪಕ್ಷದ ಮುಖಂಡರು ಹೇಗೆ ನಡೆದುಕೊಂಡರು ಎನ್ನುವ ಬಗ್ಗೆ ನನ್ನ ಅಭಿಪ್ರಾಯ ಹೇಳಿದ್ದೇನೆ.

ಈಗ ಅದರಂತೆ ಫ‌ಲಿತಾಂಶ ಬಂದಿದೆ. ದೇಶದ ಹೊಸ ಪ್ರಧಾನಿಗೆ ಅಭಿನಂದನೆ ಸಲ್ಲಿಸಿದ್ದೇನೆ. ನಮ್ಮ ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಕೂಡ ಪ್ರಧಾನಿಗೆ ಶುಭ ಕೋರಿದ್ದಾರೆ’ ಎಂದರು.”ಕಾಂಗ್ರೆಸ್‌ ನಾಯಕರ ಬಗ್ಗೆ ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನನ್ನ ಮುಂದಿನ ನಡೆ ಕಾದು ನೋಡಿ’ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next