Advertisement

ಎಕೆ ಕಾಲೋನಿ ನಿವಾಸಿಗಳ ನೀರಿನ ಬಾಕಿ ಮನ್ನಾ

11:50 AM Aug 29, 2017 | Team Udayavani |

ಬೆಂಗಳೂರು: ಅಕ್ರಮವಾಗಿ ನೀರಿನ ಸಂಪರ್ಕ ಪಡೆದುಕೊಂಡಿದ್ದ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎ.ಕೆ. ಕಾಲೋನಿ ನಿವಾಸಿಗಳು ಜಲ ಮಂಡಳಿಗೆ ನೀಡಬೇಕಿದ್ದ ಬಾಕಿ ಹಣವನ್ನು ಸರ್ಕಾರ ಮನ್ನಾ ಮಾಡಿದೆ. ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. 

Advertisement

ಈ ಕುರಿತು ಮಾತನಾಡಿರುವ ಕಾನೂನು ಸಚಿವ ಟಿ.ಬಿ. ಜಯಚಂದ್ರ, ಎ.ಕೆ. ಕಾಲೋನಿಯಲ್ಲಿ 7672 ಅನಧಿಕೃತ ನೀರಿನ ಸಂಪರ್ಕಗಳಿದ್ದು, 8 ಕೋಟಿ 3 ಲಕ್ಷ ರೂ. ಬಾಕಿ ಉಳಿಸಿಕೊಂಡಿದ್ದಾರೆ. ಅದರ ಬಡ್ಡಿ 4 ಕೋಟಿ 91 ಲಕ್ಷವಾಗಿದ್ದು, ಎಲ್ಲ ಬಾಕಿಯನ್ನು ಒಂದೇ ಬಾರಿ ಮನ್ನಾ ಮಾಡಲು ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ಕಾಲೋನಿಗೆ ಹೊಸದಾಗಿ ನೀರಿನ ಸಂಪರ್ಕ ಕಲ್ಪಿಸಲು ಆದೇಶಿಸಿರುವ ರಾಜ್ಯ ಸರ್ಕಾರ ಜಲ ಮಂಡಳಿಗೆ 3.8 ಕೋಟಿ ರೂ. ಬಿಡುಗಡೆ ಮಾಡಲು ತೀರ್ಮಾನಿಸಿದೆ ಎಂದು ಹೇಳಿದರು.

ನಗರ ಪ್ರದೇಶದಲ್ಲಿ ಟೆಂಡರ್‌ ಶ್ಯೂರ್‌ ರಸ್ತೆಗಳ ಅಭಿವೃದ್ಧಿಯನ್ನು ಮುಂದುವರಿಸಿದ್ದು, ಮೆಜೆಸ್ಟಿಕ್‌ ಸುತ್ತಮುತ್ತ ಸುಬೇದಾರ ಛತ್ರ, ಧನ್ವಂತರಿ ರಸ್ತೆ, ಡಬು, ಎಚ್‌. ಹನುಮಂತಪ್ಪ ರಸ್ತೆ, ಗಾಂಧಿನಗರ, ಮೆಜೆಸ್ಟಿಕ್‌ ಸುತ್ತಮುತ್ತ ಹಾಗೂ ಕೆ.ಆರ್‌. ಮಾರುಕಟ್ಟೆ ಸುತ್ತಲಿನ ರಸ್ತೆಗಳನ್ನು 20 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ತಿರ್ಮಾನಿಸಲಾಗಿದೆ. ಅಲ್ಲದೆ 292 ಕೋಟಿ ರೂ. ವೆಚ್ಚದಲ್ಲಿ ನಗರದ ಕೆಲ ರಸ್ತೆಗಳಿಗೆ ವೈಟ್‌ ಟ್ಯಾಪಿಂಗ್‌ ಮಾಡಲು ಅನುಮತಿ ನೀಡಲಾಗಿದೆ ಎಂದು ಹೇಳಿದರು. 

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬರುವ ನೆಲಮಂಗಲ ಬಳಿ ಅಂತಾರಾಷ್ಟ್ರೀಯ ವಸ್ತು ಕೇಂದ್ರದ ಎದುರು ಅಂಡರ್‌ ಪಾಸ್‌ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 1.6 ಕೋಟಿ ರೂಪಾಯಿ ನೀಡಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next