Advertisement

ಸಾಲ ಮನ್ನಾ ಮಾಡಿ,ಇಲ್ಲ ರಾಜೀನಾಮೆ ನೀಡಿ

06:10 AM May 29, 2018 | |

ಹುಬ್ಬಳ್ಳಿ: ರೈತರ ಸಾಲ ಮನ್ನಾ ಮಾಡಬೇಕು, ಆಗದಿದ್ದರೆ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಕೂಡಲೇ ರಾಜಿನಾಮೆ
ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಒತ್ತಾಯಿಸಿದರು.

Advertisement

ನಗರದಲ್ಲಿ ಸೋಮವಾರ ಮಾತನಾಡಿ, ರೈತರ ಬೇಡಿಕೆಯನ್ನು ಈಡೇರಿಸದ ಮೇಲೆ ಕುಮಾರಸ್ವಾಮಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವ ನೈತಿಕತೆ ಇಲ್ಲ. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಬಿಡಲ್ಲ ಎಂದರು. ರೈತರ ಸಾಲ ಮನ್ನಾ ಮಾಡುವ ವಿಚಾರದಲ್ಲಿ ಕುಮಾರಸ್ವಾಮಿ ಯೂ ಟರ್ನ್ ಹೊಡೆದಿದ್ದಾರೆ. 

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಒಂದು ವಾರ ಕಳೆದರೂ ಸಚಿವ ಸಂಪುಟ ವಿಸ್ತರಣೆ ನಡೆದಿಲ್ಲ. ರಾಜ್ಯದಲ್ಲಿ ಸಾಕಷ್ಟು ಅಭಿವೃದಿಟಛಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next