Advertisement

ಸಮಸ್ಯೆ ಪರಿಹಾರಕ್ಕಾಗಿ ವಾಕಥಾನ್‌

12:37 PM Dec 04, 2017 | Team Udayavani |

ಬೆಂಗಳೂರು: ಮಳೆಯಿಂದ ಹಾನಿಗೊಳಗಾದ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಮುಂದೆ ಇಂತಹ ಸಮಸ್ಯೆಯಾಗದಂತೆ ಶಾಶ್ವತ ಪರಿಹಾರ ಒದಗಿಸುವಂತೆ ಒತ್ತಾಯಿಸಿ ನಾಗರಿಕ ಕ್ಷೇಮಾಭಿವೃದ್ಧಿ ಸಂಘಗಳು ಹಮ್ಮಿಕೊಂಡಿದ್ದ ವಾಕಥಾನ್‌ಗೆ ಮೇಯರ್‌ ಆರ್‌.ಸಂಪತ್‌ರಾಜ್‌ ಚಾಲನೆ ನೀಡಿದರು.

Advertisement

ಈ ವೇಳೆ ನಾಗರಿಕರು ಮಳೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಿ, ರಸ್ತೆ-ಒಳಚರಂಡಿ ದುರಸ್ತಿ ಕಾರ್ಯ, ಮೂಲಸೌಕರ್ಯ, ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಎನ್ನುವಂತಹ ಫ‌ಲಕಗಳನ್ನು ಪ್ರದರ್ಶಿಸಿದರು. 

ವಾಕಥಾನ್‌ ಉದ್ದೇಶಿಸಿ ಮಾತನಾಡಿದ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಎಚ್‌ಎಸ್‌ಆರ್‌ ಬಡಾವಣೆ ಮಳೆಯಿಂದ ಅನಾಹುತಕ್ಕೆ ಸಿಲುಕಬೇಕಾದರೆ, ಕಳೆದ ಹತ್ತು ವರ್ಷಗಳಿಂದ ಪಾಲಿಕೆಯಲ್ಲಿ ಆಡಳಿತ ನಡೆಸಿದ ಸರ್ಕಾರಗಳೇ ಕಾರಣವಾಗಿವೆ. ಈಗಲಾದರೂ ಪಾಲಿಕೆಯ ಆಡಳಿತ ಎಚ್ಚೆತ್ತು ಸೂಕ್ತ ಕ್ರಮ ಜರುಗಿಸಬೇಕು ಎಂದು ಹೇಳಿದರು.

ಬಳಿಕ ಮೇಯರ್‌ ಮಾತನಾಡಿ, ಎಚ್‌ಎಸ್‌ಆರ್‌ ಬಡಾವಣೆಯ ಹಲವಾರು ಭಾಗಗಳು ಮಳೆಯಿಂದ ಹಾನಿಗೆ ಒಳಗಾಗಿವೆ. ಇದಕ್ಕೆ ಶಾಶ್ವತ ಪರಿಹಾರಕ್ಕೆ ಚಿಂತಿಸಲಾಗುವುದು. ಹಾನಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು. ಈ ವೇಳೆ ವಿಧಾನಪರಿಷತ್‌ ಸದಸ್ಯ ವಿ.ಎಸ್‌.ಉಗ್ರಪ್ಪ, ಶಾಸಕ ಸತೀಶ್‌ ರೆಡ್ಡಿ, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್‌ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಮೇಜರ್‌ ಗಿರೀಶ್‌ ರಾಷ್ಟ್ರ ಸೇವೆ ಪ್ರತಿಯೊಬ್ಬರಿಗೂ ಮಾದರಿ: ಸಾಡೇಹಳ್ಳಿಯಲ್ಲಿ ದಿವಂಗತ ಮೇಜರ್‌ ಅಕ್ಷಯ್‌ ಗಿರೀಶ್‌ ಸ್ಮರಣಾರ್ಥ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರ ಭಾವಚಿತ್ರಕ್ಕೆ ಮೇಯರ್‌ ಸಂಪತ್‌ರಾಜ್‌ ಪುಷ್ಪನಮನ ಸಲ್ಲಿಸಿದರು.

Advertisement

ಯುವಕರು ಗಿರೀಶ್‌ರಂತವಹರನ್ನು ಮಾದರಿಯಾಗಿಟ್ಟುಕೊಂಡು ಗುರಿ ಸಾಧನೆಗೆ ಮುಂದಾಗಬೇಕು ಎಂದು ತಿಳಿಸಿದರು. ಈಗಾಗಲೇ ಬಿಬಿಎಂಪಿ ವತಿಯಿಂದ ಗಿರೀಶ್‌ ಹೆಸರನ್ನು ರಸ್ತೆಯೊಂದಕ್ಕೆ ನಾಮಕರಣ ಮಾಡಲು ಚಿಂತಿಸಿದ್ದು, ಸರ್ಕಾರದ ಮಟ್ಟದಲ್ಲಿ ಅನುಮತಿ ಪಡೆದು ಶೀಘ್ರ ನಾಮಕರಣ ಮಾಡಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next