Advertisement

Sept.17ಕ್ಕೆ ಯತ್ನಾಳ್‌ ನೇತೃತ್ವದಲ್ಲಿ ಪಾದಯಾತ್ರೆ: ಪ್ರತಾಪ್‌ ಸಿಂಹ

10:17 PM Aug 14, 2024 | Team Udayavani |

ಮೈಸೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ನೂರಾರು ಕೋಟಿ ರೂ. ಹಗರಣ ಸಂಬಂಧ ಸೂಕ್ತ ತನಿಖೆಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಸೆ.17ಕ್ಕೆ ಬಿಜೆಪಿ ಹಿರಿಯ ಮುಖಂಡ ಬಸನಗೌಡ ಪಾಟೀಲ್‌ ಯತ್ನಾಳ್‌ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ.

Advertisement

ನಗರದಲ್ಲಿ ಪತ್ರಕರ್ತರೊಂದಿಗೆ ಅವರು ಮಾತನಾಡಿ, ಈ ಸಂಬಂಧ ಬೆಳಗಾವಿಯಲ್ಲಿ ಯತ್ನಾಳ್‌ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಇದು ಅತೃಪ್ತರ, ಬಂಡಾಯಗಾರರ ಸಭೆಯಲ್ಲ ಎಂದರು.

ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಸರಿಯಾದ ಹೋರಾಟ ನಡೆದರೆ ಮುಖ್ಯಮಂತ್ರಿಗಳ ಕುರ್ಚಿ ಅಲ್ಲಾಡುತ್ತದೆ. ಈ ಪಾದಯಾತ್ರೆ ಯಾರ ಮೇಲಾಟದ ಹಾಗೂ ಯಾರ ನಾಯಕತ್ವದ ಪ್ರದರ್ಶನವೂ ಅಲ್ಲ. ಪಾದಯಾತ್ರೆಗೆ ಹೈಕಮಾಂಡ್‌ ಅನುಮತಿ ಕೊಡುತ್ತದೆ. ಅವರ ಅನುಮತಿಯೊಂದಿಗೆ ಪಾದಯಾತ್ರೆ ಮಾಡಲಾಗುವುದು ಎಂದರು.

ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಯ ಭೇಟಿ ಸಂಬಂಧ ಸಚಿವ ದಿನೇಶ್‌ ಗುಂಡೂರಾವ್‌ ಟ್ವೀಟ್‌ಗೆ ತಿರುಗೇಟು ನೀಡಿದ ಪ್ರತಾಪ್‌ ಸಿಂಹ, ಆರೋಪಿಯನ್ನು ಮಾತನಾಡಿಸುವುದೇ ತಪ್ಪು ಎನ್ನುವುದಾದರೆ ನ್ಯಾಶನಲ್‌ ಹೆರಾಲ್ಡ್‌ ಹಗರಣದಲ್ಲಿ ಆರೋಪಿಗಳಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರ ಕಾಲಿಗೇಕೆ ಬೀಳುತ್ತೀರಿ ಎಂದು ಕಿಡಿಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next