Advertisement

ಕುಣಿಗಲ್: ಭಾರಿ ಮಳೆ ಗೋಡೆ ಕುಸಿದು ರೈತ ಸಾವು

07:10 PM Nov 20, 2021 | Team Udayavani |

ಕುಣಿಗಲ್ : ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ್ದಾಗಿ, ಧನದ ಕೊಟ್ಟಿಗೆಯ ಗೋಡೆ ಕುಸಿದು ರೈತನೋರ್ವನ್ನು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಮೆಣಸಿನಕೆರೆದೊಡ್ಡಿ ಗ್ರಾಮದಲ್ಲಿ ನಡೆದಿದೆ.

Advertisement

ಮೆಣಸಿನಕೆರೆದೊಡ್ಡಿ ಗ್ರಾಮದ ನಾಗಣ್ಣ (55) ಮೃತ ರೈತ
ಹಲವು ದಿನಗಳಿಂದ ತಾಲೂಕಿನಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದೆ, ಕಳೆದ ರಾತ್ರಿ ನಾಗಣ್ಣ ಕೊಟ್ಟಿಗೆಯಲ್ಲಿ ಎಮ್ಮೆ ಕಟ್ಟುಲು ಹೋಗಿದ್ದಾಗ ಗೋಡೆ ಕುಸಿದು ಮಣ್ಣಿನ ಅಡಿಯಲ್ಲಿ ಸಿಕ್ಕಿ ಹಾಕಿಕೊಂಡು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.

ಗೋಡೆ ಬಿದ್ದ ಸದ್ದಿನಿಂದ ಗಾಡರಿಗೊಂಡ ಮನೆಯವರು ಕೊಟ್ಟಿಗೆಯಲ್ಲಿ ಹೋಗಿ ನೋಡಲಾಗಿ ನಾಗಣ್ಣ ಮಣ್ಣಿನ ಅಡಿಯಲ್ಲಿ ಸಿಕ್ಕಿ ಹಾಕಿಕೊಂಡು ಕೊನೆಯುಸಿರೆಳೆದಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ಮಹಾಬಲೇಶ್ವರ ಭೇಟಿ ನೀಡಿ ಪರಿಶೀಲಿಸಿದ್ದಾರೆ, ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next