Advertisement

ನನ್ನನ್ನು ಸೋಲಿಸಲು ವಾಮಮಾರ್ಗ: ಶೆಟ್ಟರ್‌

06:55 AM May 14, 2018 | Team Udayavani |

ಹುಬ್ಬಳ್ಳಿ: ನನ್ನನ್ನು ಸೋಲಿಸಲು ಅಧಿಕಾರಿಗಳು ಹಾಗೂ ಕೆಲವರು ವಾಮಮಾರ್ಗ ಅನುಸರಿಸಿದ್ದಾರೆ ಎಂದು
ವಿಧಾನಸಭೆ ವಿಪಕ್ಷ ನಾಯಕ ಜಗದೀಶ ಶೆಟ್ಟರ ಗಂಭೀರ ಆರೋಪ ಮಾಡಿದ್ದಾರೆ. 

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಪ್ರತಿನಿಧಿಸುವ ಹುಬ್ಬಳ್ಳಿ-ಧಾರವಾಡ ಕೇಂದ್ರ
ವಿಧಾನಸಭಾ ಕ್ಷೇತ್ರದಲ್ಲಿ ಉದ್ದೇಶಪೂರ್ವಕವಾಗಿ ಸಾವಿರಾರು ಜನರ ಹೆಸರನ್ನು ಮತದಾರರ ಪಟ್ಟಿಯಿಂದ
ತೆಗೆದು ಹಾಕಲಾಗಿದೆ. ಹೀಗಾಗಿ ಕ್ಷೇತ್ರದಲ್ಲಿನ ಅನೇಕರು ಮತದಾನದಿಂದ ವಂಚಿತರಾಗಿದ್ದು, ಇದರಿಂದಲೇ
ಹು-ಧಾ ಕೇಂದ್ರ ಕ್ಷೇತ್ರದಲ್ಲಿ ಅತಿ ಕಡಿಮೆ ಶೇ.60ರಷ್ಟು ಮತದಾನವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕ್ಷೇತ್ರದಲ್ಲಿ ಹಲವಾರು ಗೋಲ್‌ಮಾಲ್‌ ನಡೆದಿದೆ. ಹು-ಧಾ ಕೇಂದ್ರದಲ್ಲಿ 26 ಅಭ್ಯರ್ಥಿಗಳು ಇದ್ದುದರಿಂದ ಎರಡು ವಿದ್ಯುನ್ಮಾನ ಮತಯಂತ್ರಗಳನ್ನು ಇರಿಸಲಾಗಿತ್ತು. ಅನೇಕ ಮತಗಟ್ಟೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು ಕ್ರಮಬದ್ಧವಾಗಿ ಇರಿಸದೆ ಅದಲು-ಬದಲು ಮಾಡಿದ್ದಾರೆ. ಏನೆಲ್ಲಾ ಹುನ್ನಾರ ನಡೆಸಿದ್ದರೂ ಮತ್ತೆ ಗೆಲುವು ಸಾಧಿಸುವ ಮೂಲಕ ನಾನೇ ಸಿಕ್ಸರ್‌ ಹೊಡೆಯುವುದು ಶತಸಿದ್ಧ. ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವುದರಲ್ಲಿ ಯಾವ ಸಂದೇಹವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next