Advertisement

Waqf Board: ಯಾರದೋ ಅಪ್ಪನ ಆಸ್ತಿ ವಿಚಾರ: ಸಚಿವ ಜಮೀರ್‌ – ಶಾಸಕ ಯತ್ನಾಳ್‌ ವಾಕ್ಸಮರ!

08:27 PM Oct 08, 2024 | Team Udayavani |

ಬೆಂಗಳೂರು: ವಕ್ಫ್ ಬೋರ್ಡ್ (Waqf Board) ಆಸ್ತಿಗೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಹಾಗೂ ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ನಡುವಿನ ವಾಕ್ಸಮರ ತಾರಕಕ್ಕೇರಿದೆ.

Advertisement

ವಕ್ಫ್ ಬೋರ್ಡ್ ಆಸ್ತಿ  ದಾನ ಕೊಟ್ಟಿರುವುದು ಮಿಸ್ಟರ್ ಯತ್ನಾಳ್‌ ಇದು ನಿಮ್ಮಪ್ಪನ ಆಸ್ತಿಯೂ ಅಲ್ಲ, ನನ್ನಪ್ಪನ ಆಸ್ತಿಯೂ ಅಲ್ಲ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌  ಪ್ರತ್ಯುತ್ತರ ನೀಡಿ ಯಾರದೋ ಅಪ್ಪನ ಆಸ್ತಿಯನ್ನು ನಮ್ಮದು ಎಂದು ಹೇಳುವ ವಕ್ಫ್ ಪರಿಕಲ್ಪನೆ ಕಾನೂನು ಅಸಾಂವಿಧಾನಿಕ, ಕಾನೂನು ಬಾಹಿರ ಎಂದು ಟಾಂಗ್‌ ನೀಡಿದ್ದಾರೆ.

ಅಪ್ಪನಿಂದ ಬಂದ ಆಸ್ತಿ ಮಾತ್ರ ಕಾನೂನುಬದ್ಧ: 
ಸೋಮವಾರ ವಿಜಯಪುರದಲ್ಲಿ ಸಚಿವ ಜಮೀರ್‌ ನೀಡಿದ ಹೇಳಿಕೆಗೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಎಕ್ಸ್‌ ಖಾತೆಯಲ್ಲಿ ತಿರುಗೇಟು ನೀಡಿ ಅಪ್ಪನಿಂದ ಬಂದ ಆಸ್ತಿ ಕಾನೂನುಬದ್ಧವಾಗಿರುತ್ತದೆ. ಯಾರದೋ ಅಪ್ಪನ ಆಸ್ತಿಯನ್ನು ನಮ್ಮದು ಎಂದು ಹೇಳುವ ವಕ್ಫ್ ಪರಿಕಲ್ಪನೆ, ಕಾನೂನು ಅಸಂವಿಧಾನಿಕ ಹಾಗೂ ಕಾನೂನು ಬಾಹಿರ. ಜಮೀರ್ ಅವರೇ, ದೇಣಿಗೆ ಪಡೆದು ಇಂದು ವಕ್ಫ್ ಬೋರ್ಡ್‌ ಭಾರತದ ಮೂರನೇ ಅತಿದೊಡ್ಡ ಭೂ ಒಡೆಯ ಆಗಿದೆಯಾ ? ಇದನ್ನು ನಂಬುವುದಕ್ಕೆ ಸಾಧ್ಯವಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಮುಸ್ಲಿಂ ಬಾಹುಳ್ಯ ದೇಶಗಳಲ್ಲೇ ವಕ್ಫ್‌ ಕಾಯ್ದೆ ಇಲ್ಲ:
ವಕ್ಫ್ ನಿಂದ ಆರ್ಥಿಕ ಸಮಾನತೆ ಸಾಧ್ಯವಿದೆಯೇ ? ಅಸಲೀಗೆ, ವಕ್ಫ್ ನಂತ ಕಾಯ್ದೆ ಮುಸ್ಲಿಂ ಬಾಹುಳ್ಯ ದೇಶಗಳಲ್ಲೇ ಇಲ್ಲ, ಇನ್ನು ಜಾತ್ಯತೀತ ದೇಶವಾದ ಭಾರತದಲ್ಲಿ ಏಕೆ ಬೇಕು ? ರೋಷಾವೇಶದಿಂದ ಟೀಕೆ ಮಾಡುವ ಮುನ್ನ ಸತ್ಯಾಸತ್ಯತೆ ಪರಾಮರ್ಶಿಸಿ. ಜಾತ್ಯತೀತ ರಾಷ್ಟ್ರದಲ್ಲಿ ವಕ್ಫ್ ಕಾನೂನುಗಳು ಅರಾಜಕತೆ ಉಂಟುಮಾಡುತ್ತದೆ ಎಂಬುದನ್ನು ತಿಳಿಯಿರಿ.

ಸಿಕ್ಕ, ಸಿಕ್ಕ ಭೂಮಿ ನಮ್ಮದು ಎಂದು ನಿಮ್ಮ ಷರಿಯಾ ಕಾನೂನನ್ನು ಇಲ್ಲಿ ಅನ್ವಯಗೊಳಿಸಲು ಇದು ಇರಾನ್ ಅಥವಾ ಟರ್ಕಿ ಅಲ್ಲ. ಇದು ಭಾರತ. ಜವಾಬ್ದಾರಿಯುತ ಸಚಿವರಾಗಿ, ತೂಕವಾಗಿ, ಪ್ರಬುದ್ಧತೆಯಿಂದ ಮಾತನಾಡಿ. ಕುಂಟುತ್ತಿರುವ ನಿಮ್ಮ ಘನತೆಗೆ ಸರಿಯಾದೀತು ಎಂದು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next