Advertisement

Waqf issue: ಸ್ಪೀಕರ್‌ಗೆ ವಿಪಕ್ಷ ನಾಯಕರಿಂದ ಪತ್ರ

09:50 PM Oct 15, 2024 | Team Udayavani |

ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿ ರಚನೆಯಾಗಿರುವ ಸಂಸತ್ತಿನ ಉಭಯ ಸದನಗಳ ಜಂಟಿ ಸದನ ಸಮಿತಿ ಸಭೆಯಲ್ಲಿ ಮಂಗಳವಾರವೂ ಪ್ರತಿಪಕ್ಷ ಮತ್ತು ಆಡಳಿತ ಪಕ್ಷದ ಸದಸ್ಯರ ನಡುವೆ ಜಟಾಪಟಿ ಮುಂದುವರಿದಿದೆ. ಸಭೆಯ ವೇಳೆ ಸಂಸತ್ತಿನ ನೀತಿ ಸಂಹಿತೆಯ ಸಮಗ್ರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾಗೆ ಪ್ರತಿಪಕ್ಷದ ಸದಸ್ಯರು ಪತ್ರ ಬರೆದಿದ್ದಾರೆ.

Advertisement

ಮಂಗಳವಾರ ವಕ್ಫ್ ಮಂಡಳಿಗಳಲ್ಲಿ ಮಹಿಳೆಯ ಸೇರ್ಪಡೆ ಪ್ರಸ್ತಾಪದ ವೇಳೆ ಬಿಜೆಪಿಯ ನಿಶಿಕಾಂತ್‌ ದುಬೆ, ದಿಲೀಪ್‌ ಸೈಕಿಯಾ, ಅಭಿಜಿತ್‌ ಗಂಗೂಲಿ, ಟಿಎಂಸಿಯ ಕಲ್ಯಾಣ್‌ ಬ್ಯಾನರ್ಜಿ, ಕಾಂಗ್ರೆಸ್‌ನ ಗೌರವ್‌ ಗೊಗೋಯಿ ಮಧ್ಯೆ ತೀವ್ರ ವಾಗ್ವಾದ ನಡೆಯಿತು. ಈ ವೇಳೆ ಜೆಪಿಸಿ ಅಧ್ಯಕ್ಷ ಪಾಲ್‌ ಅವರು ನಿಯಮದ ಪ್ರಕಾರ ನಡೆದುಕೊಳ್ಳುತ್ತಿಲ್ಲ ಮತ್ತು ಆಡಳಿತ ಪಕ್ಷದ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿಪಕ್ಷ ಸದಸ್ಯರು ಆರೋಪಿಸಿದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ಸದಸ್ಯರು, ಪ್ರತಿಪಕ್ಷ ಸದಸ್ಯರು ಅಧ್ಯಕ್ಷರನ್ನು ನಿಂದಿಸುತ್ತಿದ್ದಾರೆ ಎಂದು ದೂರಿದರು.

ಸೋಮವಾರ ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಕ್ಫ್ ಭೂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದರಿಂದ ಪ್ರತಿಪಕ್ಷ ಸದಸ್ಯರು ಸಭೆ ಬಹಿಷ್ಕರಿಸಿ ಹೊರ ನಡೆದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next