Advertisement
ವಿಕಾಸಸೌಧದಲ್ಲಿ ಶನಿವಾರ ವಕ್ಫ್ ಆಸ್ತಿಗಳ ರಕ್ಷಣೆ ಹಾಗೂ ಅಭಿವೃದ್ಧಿ ಕುರಿತು ಮುತವಲ್ಲಿಗಳ ಸಭೆ ನಡೆಸಿದ ಅವರು, ವಕ್ಫ್ ಆಸ್ತಿ ಸರಿಯಾಗಿ ನಿರ್ವಹಣೆ ಮಾಡಿ ಅಗತ್ಯ ಇರುವ ಕಡೆ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಿದರೆ ಸರ್ಕಾರದ ಮುಂದೆ ಅನುದಾನ ಕೇಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು.
Related Articles
Advertisement
ಮುಸ್ಲಿಂ ಸಮುದಾಯದ ಸ್ಮಶಾನಗಳಿಗೆ ಕಾಂಪೌಂಡ್ ಇಲ್ಲದೆ ಒತ್ತುವರಿಯಾಗಿರುವ ಪ್ರಕರಣಗಳ ಬಗ್ಗೆಯೂ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಎಲ್ಲೆಲ್ಲಿ ಕಾಂಪೌಂಡ್ ಅಗತ್ಯವಿದೆಯೋ ಅಲ್ಲಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯ ಸರ್ಕಾರವು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ. ಅದರ ಮಾಹಿತಿ ಸಮುದಾಯಕ್ಕೆ ಕೊಡುವ ಹೊಣೆಗಾರಿಕೆ ನಿಮ್ಮ ಮೇಲಿದೆ. ಶಿಕ್ಷಣ, ಆರೋಗ್ಯ, ಸಮುದಾಯ ಭವನ ನಿರ್ಮಾಣಕ್ಕೆ ನಾವು ಹೆಚ್ಚು ಒತ್ತು ನೀಡಬೇಕಿದೆ ಎಂದು ಹೇಳಿದರು.
ರಾಜ್ಯದಲ್ಲಿ ಆಧಾರ್ ಕಾರ್ಡ್ ಶೇ.96 ರಷ್ಟು ಮುಗಿದಿದೆ. ಶೇ.4 ಮಾತ್ರ ಉಳಿದಿದೆ. ನನ್ನ ಪ್ರಕಾರ ಇನ್ನೂ ಆಧಾರ್ ಕಾರ್ಡ್ ಮಾಡಿಸಿಕೊಳ್ಳದೆ ಇರುವವರಲ್ಲಿ ನಮ್ಮ ಸಮುದಾಯದವರೇ ಹೆಚ್ಚು ಎನಿಸುತ್ತದೆ. ಆಧಾರ್ ಕಾರ್ಡ್, ಪಡಿತರ ಕಾರ್ಡ್ ಮಾಡಿಸಿಕೊಳ್ಳಲು ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು. ಸರ್ಕಾರದ ಸವಲತ್ತುಗಳನ್ನು ತಲುಪಿಸಲು ಅಧಿಕಾರಿಗಳಷ್ಟೇ ಅಲ್ಲದೆ ಸಮುದಾಯದ ಮುಖಂಡರೂ ಮುಂದಾಗಬೇಕು ಎಂದು ತಿಳಿಸಿದರು.