Advertisement

Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ

07:39 PM Oct 27, 2024 | Esha Prasanna |

ವಿಜಯಪುರ: ಜಿಲ್ಲೆಯಲ್ಲಿ ವಕ್ಫ್ ಆಸ್ತಿ ಬಗ್ಗೆ ರೈತರಿಗೆ ನೋಟಿಸ್ ನೀಡುತ್ತಿರುವ ವಿಷಯವು ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಈ ನಡುವೆ ನೊಂದ ರೈತರ ಅಹವಾಲು ಆಲಿಸಲು ರಾಜ್ಯ ಬಿಜೆಪಿ ವತಿಯಿಂದ ಮಾಜಿ ಉಪಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ ಅವರನ್ನೊಳಗೊಂಡ ತಂಡವನ್ನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಚಿಸಿದ್ದಾರೆ.

Advertisement

ವಿಜಯಪುರ ಜಿಲ್ಲಾದ್ಯಂತ ವಕ್ಫ್ ಬೋರ್ಡ್ ಕಾಯ್ದೆಯಿಂದ ಆಗುತ್ತಿರುವ ತೊಂದರೆ ಹಾಗೂ ತೊಂದರೆಗೊಳಗಾದ ರೈತರ ಅಹವಾಲು ಆಲಿಸಲು ತಂಡ ರಚಿಸಲಾಗಿದ್ದು, ಈ ತಂಡವು ಅ.29ರಂದು ವಿಜಯಪುರಕ್ಕೆ ಭೇಟಿ ನೀಡಿ ರೈತರಿಗಾದ ಸಮಸ್ಯೆಯ ಅರಿತು ಸಮಗ್ರ ವರದಿ ನೀಡಲು ನಿರ್ದೇಶಿಸಲಾಗಿದೆ.

ಈ ತಂಡದಲ್ಲಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಶಾಸಕರಾದ ಹರೀಶ ಪೂಂಜಾ, ಮಹೇಶ ಟೆಂಗಿನಕಾಯಿ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಮತ್ತು ರೈತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಈ ತಂಡದ ಸದಸ್ಯರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ವಿಜಯೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next