Advertisement

ಕಿಚ್ಚ, ದರ್ಶನ್ ಮುನಿಸು; ಅಂಬಿ ಮಧ್ಯಸ್ಥಿಕೆ ಬಗ್ಗೆ ಸುಮಲತಾ ಹೇಳೋದೇನು?

04:17 PM Mar 13, 2017 | Sharanya Alva |

ಬೆಂಗಳೂರು: ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಕಿಚ್ಚ ಸುದೀಪ್ ಹಾಗೂ ತೂಗುದೀಪ್ ದರ್ಶನ್ ನಡುವಿನ ವಿವಾದಕ್ಕೆ ಸಂಬಂಧಿಸಿದಂತೆ ಹಿರಿಯ ನಟ ಅಂಬರೀಶ್ ಅವರು ಮಧ್ಯಸ್ಥಿಕೆ ವಹಿಸಬೇಕೆಂಬ ಅಭಿಮಾನಿಯೊಬ್ಬರ ಟ್ವೀಟ್ ಗೆ ಸುಮಲತಾ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಸುದೀಪ್ ಹಾಗೂ ದರ್ಶನ್ ಸರಿ, ತಪ್ಪು ನಿರ್ಧಾರಗಳನ್ನು ಕೈಗೊಳ್ಳಲು ಸ್ವತಂತ್ರರು. ಇಬ್ಬರೂ ಸರಿ, ತಪ್ಪು ನಿರ್ಧಾರ ಕೈಗೊಳ್ಳುವಷ್ಟು ಬುದ್ಧಿವಂತರು ಎಂದು ಉತ್ತರಿಸುವ ಮೂಲಕ ವಿವಾದದಲ್ಲಿ ಅಂಬರೀಶ್ ಮಧ್ಯಪ್ರವೇಶಿಸದಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅವರ ನಿರ್ಧಾರಗಳನ್ನು ನಾವು ಗೌರವಿಸಬೇಕು ಎಂದು ತಿಳಿಸಿದ್ದಾರೆ.

ಅಂಬರೀಶ್ ಮಧ್ಯಸ್ಥಿಕೆ ವಹಿಸುವಂತೆ ಹೇಳಿ ಎಂಬ ಅಭಿಮಾನಿಯೊಬ್ಬರ ಟ್ವೀಟ್ ಗೆ ಅಂಬರೀಶ್ ಪತ್ನಿ ಸುಮಲತಾ ಅವರು ಟ್ವೀಟ್ ನಲ್ಲಿ ಈ ರೀತಿ ಉತ್ತರ ನೀಡಿದ್ದಾರೆ.

ಇತ್ತೀಚೆಗಷ್ಟೇ ನಟ ದರ್ಶನ್, ನಾನು ಮತ್ತು ಸುದೀಪ್ ಇನ್ಮುಂದೆ ಗೆಳೆಯರಲ್ಲ, ಸ್ಯಾಂಡಲ್ ವುಡ್ ನ ನಟರು ಅಷ್ಟೇ ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಕಿಚ್ಚ ಸುದೀಪ್, ಗಿವ್ ರೆಸ್ಪೆಕ್ಟ್ ಅಂಡ್ ಟೇಕ್ ರೆಸ್ಪೆಕ್ಟ್ ಎಂದು ತಿರುಗೇಟು ನೀಡಿದ್ದರು. ಇಬ್ಬರ ನಡುವಿನ ಸಂಬಂಧ ಹಳಸಿರುವುದಕ್ಕೆ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಇಬ್ಬರ ನಡುವೆ ಸಂಧಾನ ನಡೆಸಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಅಂಬರೀಶ್ ಅವರನ್ನು ಅಭಿಮಾನಿಗಳು ಒತ್ತಾಯಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

Advertisement
Advertisement

Udayavani is now on Telegram. Click here to join our channel and stay updated with the latest news.

Next