Advertisement
ರಕ್ಷಿತಾರಣ್ಯ/ಡೀಮ್ಡ್ ಫಾರೆಸ್ಟ್ ಪ್ರದೇಶದಲ್ಲಿ ಕಾಮಗಾರಿ ನಡೆಸಲು ಅವಕಾಶ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಪ್ರಸ್ತಾವನೆ ಕೂಡ ಅರಣ್ಯ ಇಲಾಖೆಯ ಕೇಂದ್ರ ಕಚೇರಿಯಲ್ಲೇ ಉಳಿದುಕೊಂಡಿದೆ.
ವಾರಾಹಿ ಏತನೀರಾವರಿ ಯೋಜನೆಯಡಿ ಜಾಕ್ವೆಲ್, ಪಂಪ್ಹೌಸ್, ಡೆಲಿವರಿ ಛೇಂಬರ್, ಸಬ್ಸ್ಟೇಷನ್ ಮತ್ತು ವಿದ್ಯುತ್ ಮಾರ್ಗ ಕಾಮಗಾರಿ ಪೂರ್ಣಗೊಂಡಿದೆ. 9.63 ಮುಖ್ಯ ಕಾಲುವೆಯಲ್ಲಿ 2.22 ಕಿ.ಮೀ. ಪೂರ್ಣಗೊಂಡಿದ್ದು 7.41 ಬಾಕಿಯಿದೆ. 10.50 ಕಿ.ಮೀ ದೂರದ ಉಪ ಕಾಲುವೆ -1ರಲ್ಲಿ 6.82 ಕಿ.ಮೀ. ಪೂರ್ಣಗೊಂಡಿದ್ದು 3.68 ಕಿ.ಮೀ ಬಾಕಿಯಿದೆ. 6.64 ಕಿ.ಮೀ. ದೂರದ ಉಪಕಾಲುವೆ-2ರಲ್ಲಿ 4.99 ಕಿ.ಮೀ. ಪೂರ್ಣಗೊಂಡಿದ್ದು 1.65 ಕಾಮಗಾರಿ ಬಾಕಿಯಿದೆ. ರಕ್ಷಿತಾರಣ್ಯ/ ಡೀಮ್ಡ್ ಪ್ರದೇಶದ ವ್ಯಾಪ್ತಿಯಲ್ಲಿ ಭೂಮಿ ಕುರಿತು ಅರಣ್ಯ ಇಲಾಖೆಗೆ ಪ್ರಸ್ತಾವನೆ ಹೋಗಿದೆ. ಅಲ್ಲಿಂದ ಅನುಮತಿ ಇನ್ನೂ ಬಂದಿಲ್ಲ.
Related Articles
ವಾರಾಹಿ ಯೋಜನೆಯಡಿ ಐದು ಏತ ನೀರಾವರಿ ಯೋಜನೆಗಳು ಬರುತ್ತವೆ. ಅದರಲ್ಲಿ 3 ಪೂರ್ಣಗೊಂಡಿದ್ದು ಎರಡು ಟೆಂಡರ್ ಅನುಮೋದನೆ ಹಂತದಲ್ಲಿದೆ. 1,730 ಹೆಕ್ಟೇರ್ ಪ್ರದೇಶಕ್ಕೆ ನೀರು ಪೂರೈಸುವ ಸೌಪರ್ಣಿಕ ನೀರಾವರಿ ಯೋಜನೆ 64.65 ಕೋ.ರೂ. ವೆಚ್ಚದಲ್ಲಿ ಪೂರ್ಣಗೊಂಡಿದೆ. 1,350 ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುವ ಸೌಕೂರು ಏತ ನೀರಾವರಿ ಯೋಜನೆ 73.71 ಕೋ.ರೂ. ವೆಚ್ಚದಲ್ಲಿ ಪೂರ್ಣಗೊಂಡಿದೆ. 1,500 ಹೆಕ್ಟೇರ್ ಪ್ರದೇಶಕ್ಕೆ ನೀರು ಪೂರೈಸುವ ಎಣ್ಣೆಹೊಳೆ ಏತ ನೀರಾವರಿ ಯೋಜನೆ 108 ಕೋ.ರೂ. ವೆಚ್ಚದಲ್ಲಿ ಪೂರ್ಣಗೊಂಡಿದೆ. 1,200 ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸುವ ಸಿದ್ದಾಪುರ ಏತ ನೀರಾವರಿ ಯೋಜನೆಗೆ 190 ಕೋ.ರೂ. ಅಂದಾಜುಪಟ್ಟಿ ಹಾಗೂ 1,100 ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುವ ಸ್ವರ್ಣಾ ಏತ ನೀರಾವರಿ ಯೋಜನೆಗೆ 188 ಕೋ.ರೂ. ಅಂದಾಜುಪಟ್ಟಿ ಸಿದ್ಧಪಡಿಸಿ, ಸರಕಾರಕ್ಕೆ ಸಲ್ಲಿಸಲಾಗಿದೆ. ಈ ಎರಡು ಏತ ನೀರಾವರಿ ಯೋಜನೆ ಸದ್ಯ ಟೆಂಡರ್ ಅನುಮೋದನೆ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ.
Advertisement
15,702 ಹೆಕ್ಟೇರ್ನಲ್ಲಿ 120 ಕಿ.ಮೀ. ವಾರಾಹಿ ಅಚ್ಚುಕಟ್ಟುಬಲದಂಡೆ ಸಾಮಾನ್ಯ ನಾಲೆ ಒಟ್ಟು 42.73 ಕಿ.ಮೀ. ಉದ್ದವಿದ್ದು 1,992 ಹೆಕ್ಟೇರ್ ಪ್ರದೇಶ ಒಳಗೊಳ್ಳಲಿದೆ. ಎಡದಂಡೆ ನಾಲೆ 44.35 ಕಿ.ಮೀ. ಉದ್ದವಿದ್ದು 10,987 ಹೆಕ್ಟೇರ್ ಹಾಗೂ ಏತ ನೀರಾವರಿ ಕಾಲುವೆ 33 ಕಿ.ಮೀ. 2,723 ಹೆಕ್ಟೇರ್ ಪ್ರದೇಶವನ್ನು ಒಳಗೊಳ್ಳಲಿದೆ. ಒಟ್ಟಾರೆಯಾಗಿ 120 ಕಿ.ಮೀ. ನಾಲೆ/ ಕಾಲುವೆಯು 15,702 ಹೆಕ್ಟೇರ್ ಪ್ರದೇಶವನ್ನು ಒಳಗೊಳ್ಳಲಿದೆ. ವಾರಾಹಿ ಬಲದಂಡೆ ಸಾಮಾನ್ಯ ನಾಲೆಯ 18.72 ಕಿ.ಮೀ ಉದ್ದದ ಕಾಲುವೆ ನಿರ್ಮಾಣ ಈಗಾಗಲೇ ಪೂರ್ಣಗೊಂಡಿದೆ. ಆದರೆ 24.05 ಕಿ.ಮೀ. ಉದ್ದದ ಕಾಲುವೆ ನಿರ್ಮಾಣ ಕಾಮಗಾರಿ ಇನ್ನು ಆರಂಭವಾಗಿಲ್ಲ. ವಾರಾಹಿ ಎಡದಂಡೆಯ 43.45 ಕಿ.ಮೀಃ ಉದ್ದದ ಕಾಲುವೆ ಹಾಗೂ 147 ಕಿ.ಮೀ ಇದ್ದದ ವಿತರಣ ನಾಲೆಯಲ್ಲಿ 20.35 ಕಿ.ಮೀ. ಕಾಮಗಾರಿ ಪ್ರಗತಿಯಲ್ಲಿದೆ. 52.95 ಕಿ.ಮೀ. ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಕ ಹಂತದಲ್ಲಿ ಬಾಕಿಯಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ. ವಾರಾಹಿ ಯೋಜನೆ ಸಂಬಂಧ ಸಮಗ್ರ ಮಾಹಿತಿ ಎಂಜಿನಿಯರ್ಗಳ ಮೂಲಕ ಪಡೆಯಲಾಗಿದೆ. ರಕ್ಷಿತಾರಣ್ಯ/ಡೀಮ್ಡ್ ಫಾರೆಸ್ಟ್ಗಳಲ್ಲಿ ಕಾಮಗಾರಿ ನಡೆಸಲು ಅನುಮತಿ ಕೋರಿ ಅರಣ್ಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲಿಂದ ಆದಷ್ಟು ಬೇಗ ಅನುಮತಿ ಪಡೆಯಲು ಪ್ರಯತ್ನಿಸಲಾಗುವುದು.
– ಡಾ| ವಿದ್ಯಾ ಕುಮಾರಿ, ಜಿಲ್ಲಾಧಿಕಾರಿ, ಉಡುಪಿ ರಾಜು ಖಾರ್ವಿ ಕೊಡೇರಿ