Advertisement

ಬಿಜೆಪಿಯಲ್ಲಿ ಬಿಎಸ್ ವೈ ಕಡೆಗಣನೆ ಮಾಡಿದರೆ ಎಚ್ಚರಿಕೆ : ರಾಜ್ಯಾಧ್ಯಕ್ಷರಿಗೆ ಪತ್ರ 

09:02 AM Sep 28, 2019 | Team Udayavani |

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಡೆಗಣನೆ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಭೀಮಾಶಂಕರ್ ಪಾಟೀಲ್ ಪತ್ರ ಬರೆದಿದ್ದಾರೆ.

Advertisement

ಯಡಿಯೂರಪ್ಪನವರು ಸಂಘಟನೆಯನ್ನ ತಮ್ಮ ಸ್ವರ್ಥಕ್ಕೆ ಬಳಸಿಕೊಳ್ಳುತ್ತಿದ್ದವರನ್ನ ಮುಲಾಜಿಲ್ಲದೆ ಹೊರಗಿಟ್ಟು ಪಕ್ಷ ಸಂಘಟನೆ ಮಾಡಿದ್ದಾರೆ.  ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಈ ಮಟ್ಟಿನ ಸಾಧನೆ ಮಾಡಲು ಬಿ ಎಸ್ ಯಡಿಯೂರಪ್ಪ ಅವರು ಕಾರಣ.  ಅವರನ್ನು ಕಡೆಗಣನೆ ಮಾಡಿದರೆ ಉತ್ತರ ಕರ್ನಾಟಕ ಭಾಗದ ಬಿಜೆಪಿ ಕಾರ್ಯಕರ್ತರು ಸುಮ್ಮನಿರಲ್ಲ ಎಂದು ಭೀಮಾಶಂಕರ್ ಪಾಟೀಲ್ ಪತ್ರ ಬರೆದಿದ್ದಾರೆ.

ಬಿ ವೈ ವಿಜಯೇಂದ್ರ ಅವರನ್ನೂ ತುಳಿಯುವ ಪ್ರಯತ್ನಗಳು ಪಕ್ಷದಲ್ಲಿ ನಡೆಯುತ್ತಿವೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಉತ್ತರ ಕರ್ನಾಟಕ ಭಾಗದ 13 ಜಿಲ್ಲೆಗಳ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಕೊಡುತ್ತಾರೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಸುರಾನಾ ಹಾಗೂ ಭಾನುಪ್ರಕಾಶ್ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಈ ಅಸಮಾಧಾನ ಭುಗಿಲೆದ್ದಿದೆ.

Advertisement

Udayavani is now on Telegram. Click here to join our channel and stay updated with the latest news.

Next