Advertisement

ಪಿಡಿಒಗಳ ವಿರುದ್ಧ ಶಿಸ್ತುಕ್ರಮದ ಎಚ್ಚರಿಕೆ

10:46 PM Jun 24, 2019 | Lakshmi GovindaRaj |

ಬೆಂಗಳೂರು: ಕೇಂದ್ರ ಸರ್ಕಾರದ “ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ತ್ವರಿತ ಅನುಷ್ಠಾನಕ್ಕೆ ರೈತರ ಮಾಹಿತಿಗಳನ್ನು “ಪಿಎಂ-ಕಿಸಾನ್‌ ಪೋರ್ಟ್‌ಲ್‌’ನಲ್ಲಿ ಅಳವಡಿಸಲು ಉದಾಸೀನತೆ ತೋರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಸಿದೆ.

Advertisement

ಕೇಂದ್ರ ಸರ್ಕಾರದ ಈ ಯೋಜನೆಯನ್ನು ಎಲ್ಲ ಭೂಹಿಡುವಳಿದಾರರಿಗೂ ವಿಸ್ತರಿಸಿ ಇದೇ ಜೂ.7ರಂದು ಪರಿಷ್ಕೃತ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಆ ಸಂಬಂಧ ಜೂ.17ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಜಿಲ್ಲಾಧಿಕಾರಿಗಳು ಮತ್ತು ಸಂಬಂಧಪಟ್ಟ ಇತರ ಅಧಿಕಾರಿಗಳಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಾಹಿತಿ ನೀಡಿದ್ದಾರೆ.

ಅದರಂತೆ, ರೈತರ ಮಾಹಿತಿಗಳನ್ನು ಜೂ.30ರೊಳಗೆ ಕಡ್ಡಾಯವಾಗಿ ಪೋರ್ಟಲ್‌ನಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಆದ್ದರಿಂದ ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪರಿಷ್ಕೃತ ಮಾರ್ಗಸೂಚಿಗಳ ಅನ್ವಯ ನಿಗದಿತ ನಮೂನೆಗಳನ್ನು ರೈತರಿಗೆ ನೀಡಿ ಮಾಹಿತಿಗಳನ್ನು ಪಡೆದು ಮುಂದಿನ ಕ್ರಮ ವಹಿಸಬೇಕು. ಉದಾಸೀನತೆ ತೋರುವ ಪಿಡಿಒಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸುತ್ತೋಲೆ ಹೊರಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next