Advertisement

ಗ್ರಾಮಸ್ಥರಿಂದ ಮತದಾನ ಬಹಿಷ್ಕಾರದ ಎಚ್ಚರಿಕೆ; ಸಾಮೂಹಿಕ ರಾಜೀನಾಮೆ ನೀಡಲು ಮುಂದಾದ ಕಾರ್ಯಕರ್ತರು

01:06 PM Dec 02, 2022 | Team Udayavani |

ಚಿಕ್ಕಮಗಳೂರು: ಗ್ರಾಮದ ರಸ್ತೆ ದುರಸ್ತಿ ಮಾಡದ ಸರ್ಕಾರ, ಜನ ಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡುವ ಎಚ್ಚರಿಕೆ ನೀಡಿದ ಘಟನೆ ನಡೆದಿದೆ.

Advertisement

2023ರ ಎಂ.ಎಲ್.ಎ. ಚುನಾವಣೆಯ ಮೊದಲ ಬಹಿಷ್ಕಾರದ ಕೂಗು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ ತಾಲೂಕಿನ ಜಯಪುರ ಸಮೀಪದ ಹಾಡುಗಾರ ಗ್ರಾಮಸ್ಥರಿಂದ ಕೇಳಿ ಬಂದಿದೆ. 450ಕ್ಕೂ ಅಧಿಕ ಜನ ಓಡಾಡುವ ರಸ್ತೆ‌ ಸಂಪೂರ್ಣ ಕುಸಿಯುವ ಹಂತ ತಲುಪಿರುವ ಬಗ್ಗೆಯೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next