Advertisement

ಅನುಮತಿ ಇಲ್ಲದೆ ಹಾಡು ಬಳಸಿದ ಆರೋಪ : ನಟ ರಕ್ಷಿತ್‌ ಶೆಟ್ಟಿ ವಿರುದ್ಧ ವಾರೆಂಟ್‌

11:00 AM Apr 10, 2021 | Team Udayavani |

ಬೆಂಗಳೂರು: ಕಿರಿಕ್‌ ಪಾರ್ಟಿ ಸಿನಿಮಾದಲ್ಲಿ ಅನುಮತಿ ಇಲ್ಲದೆ ಹಾಡು ಬಳಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ಸೇರಿದಂತೆ ಇತರ ಆರೋಪಿಗಳ ವಿರುದ್ಧ ನಗರದ 9ನೇ ಎಸಿಎಂಎಂ ನ್ಯಾಯಾಲಯ ವಾರೆಂಟ್‌ ಜಾರಿ ಮಾಡಿದೆ.

Advertisement

ಲಹರಿ ಆಡಿಯೋ ಸಂಸ್ಥೆ ಕಾಪಿ ರೈಟ್‌ ಕಾಯ್ದೆಯಡಿ ನಟ ರಕ್ಷಿತ್‌ ಶೆಟ್ಟಿ, ಪರಮಾÌ ಸ್ಟುಡಿಯೋ ಪ್ರೈವೇಟ್‌ ಲಿಮಿಟೆಡ್‌ ಹಾಗೂ ಸಂಗೀತ ನಿರ್ದೇಶಕ ಅಜನೀಶ್‌ ಲೋಕನಾಥ್‌ ವಿರುದ್ಧ ದಾಖಲಿಸಿರುವ ಪ್ರಕರಣದ ವಿಚಾರಣೆಗೆ ನಡೆಸಿದ 9ನೇ ಎಸಿಎಂಎಂ ಕೋರ್ಟ್‌ ಆರೋಪಿಗಳಿಗೆ ವಾರೆಂಟ್‌ ಜಾರಿಗೊಳಿಸಿ ಆದೇಶಿಸಿದೆ.

ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 9ನೇ ಎಸಿಎಂಎಂ ಕೋರ್ಟ್‌ ಆರೋಪಿಗಳಿಗೆ ಸಮನ್ಸ್‌ ಜಾರಿ ಮಾಡಿತ್ತು. ಆದರೆ ಆರೋಪಿಗಳು ನ್ಯಾಯಾಲಯಕ್ಕೆ ನಿರಂತರ ಗೈರು ಹಾಜರಾದ ಹಿನ್ನಲೆಯಲ್ಲಿ ಕೋರ್ಟ್‌ 8ನೇ ಬಾರಿ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ ಮಾಡಿದೆ.

ಇದನ್ನೂ ಓದಿ : ಬಂಗಾರಪೇಟೆ ತಾಲೂಕಿನ ಕಾಂಗ್ರೆಸ್‌ ಪಕ್ಷದಲ್ಲಿ ಭಿನ್ನಮತ ಸ್ಫೋಟ ಸಾಧ್ಯತೆ

Advertisement

Udayavani is now on Telegram. Click here to join our channel and stay updated with the latest news.

Next