Advertisement

ಕಳತ್ತೂರಿನ ಯೋಧ ಜಾರ್ಖಂಡ್ ನಲ್ಲಿ ಹೃಯಾಘಾತದಿಂದ ಸಾವು

12:32 PM Nov 07, 2021 | Team Udayavani |

ಕಾಪು : ಕರ್ತವ್ಯ ನಿರತ ಸೇನಾ ಯೋಧ ಕಾಪು ತಾಲೂಕು ಕಳತ್ತೂರು ಚಂದ್ರನಗರ ಕನ್ನಡರಬೆಟ್ಟು ನಿವಾಸಿ ನವೀನ್ ಕುಮಾರ್ ಕರ್ಕಡ (50) ಅವರು ಜಾರ್ಖಂಡ್ ನಲ್ಲಿ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

Advertisement

ಸಿಐಎಸ್ಎಫ್ ಯೋಧನಾಗಿ ಕಳೆದ 29 ವರ್ಷಗಳಿಂದ ಸೇನಾ ಕರ್ತವ್ಯ ನಿರತರಾಗಿದ್ದ ಅವರು ಮುಂದಿನ ವರ್ಷದಲ್ಲಿ ಕರ್ತವ್ಯದಿಂದ ನಿವೃತ್ತಿ ಹೊಂದುವವರಿದ್ದರು.

ಬಿಹಾರ, ರಾಂಚಿ, ದೆಹಲಿ, ಮೈಸೂರು, ನಾಗ್ಪುರ ಸಹಿತ ದೇಶದ ವಿವಿಧೆಡೆಗಳ ಸೇನಾ ನೆಲೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಜಾರ್ಖಂಡ್ ಸೇನಾ‌ ನೆಲೆಯಿಂದ, ಕೊಲ್ಕತ್ತಾ, ಮುಂಬಯಿ ಮಾರ್ಗದ ಮೂಲಕವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಮೃತದೇಹವನ್ನು ತರಲಾಗುತ್ತಿದ್ದು, ರವಿವಾರ ಸಂಜೆ ಪಾದೂರು ಚರ್ಚ್ ನಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.

ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಸಹೋದರರು ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Advertisement

ಇದನ್ನೂ ಓದಿ : ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಸಾವನ್ನಪ್ಪಿದ ಹಿಂಬದಿ ಸವಾರ

ಸಂತಾಪ : ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಸಮಾಜ ಸೇವಕ ಸುರೇಶ್ ಪಿ. ಶೆಟ್ಟಿ ಗುರ್ಮೆ ಸಹಿತ ವಿವಿಧ ಗಣ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸ್ಥಳೀಯಾಡಳಿತ ಸಂಸ್ಥೆಯ ಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next