Advertisement

ಯೋಧ ಹುತಾತ್ಮ: ಸಾಂತ್ವನ ಹೇಳಲು ಬಾರದ ಜನಪ್ರತಿನಿಧಿಗಳು; ಗ್ರಾಮಸ್ಥರ ತೀವ್ರ ಆಕ್ರೋಶ

01:18 PM Oct 02, 2019 | Team Udayavani |

ಹುಬ್ಬಳ್ಳಿ: ವೀರಯೋಧ ಮಂಜಪ್ಪ ಓಲೇಕಾರ ಹುತಾತ್ಮರಾದ ಹಿನ್ನಲೆಯಲ್ಲಿ ಗ್ರಾಮಕ್ಕೆ ಜನಪ್ರತಿನಿಧಿಗಳು ಆಗಮಿಸದ್ದರಿಂದ ಗ್ರಾಮಸ್ಥರು ತೀವ್ರ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಜಮ್ಮು-ಕಾಶ್ಮೀರ ಗಡಿಯಲ್ಲಿ ಉಗ್ರರ ಜೊತೆಗೆ ನಡೆದ ಗುಂಡಿನ ದಾಳಿಯಲ್ಲಿ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರದ ಮಂಜುನಾಥ ಹನುಮಂತಪ್ಪ ಓಲೇಕಾರ (29) ಎಂಬ ಯೋಧ ಹುತಾತ್ಮರಾಗಿದ್ದರು. 20ನೇ ವರ್ಷದಲ್ಲಿ ಯೋಧನಾಗಿ ಸೇವೆ ಆರಂಭಿಸಿದ್ದ ಅವರು, 6 ತಿಂಗಳ ಹಿಂದಷ್ಟೇ ವಿವಾಹವಾಗಿ ಕರ್ತವ್ಯಕ್ಕೆ ಮರಳಿದ್ದರು. ಹುತಾತ್ಮ ಯೋಧ ಮಂಜುನಾಥ ಕಳೆದ 9 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು.

ಹುತಾತ್ಮರಾದ ಹಿನ್ನಲೆಯಲ್ಲಿ ಸಾಂತ್ವಾನ ಹೇಳಲು ಗ್ರಾಮಕ್ಕೆ ಶಾಸಕರು, ಸಂಸದರು ಬಾರದೆ ವೀರಯೋಧನಿಗೆ ಅವಮಾನ ಮಾಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ, ಕೇಂದ್ರ ಸಚಿವ ಹುಬ್ಬಳ್ಳಿಯಲ್ಲಿದ್ದರೂ ಆಗಮಿಸಿಲ್ಲ ಎಂದು ಗ್ರಾಮಸ್ಥರ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಒಂದು ಗಂಟೆ ಸಮಯ ನೀಡಿರುವ ಗ್ರಾಮಸ್ಥರು. ಜನಪ್ರತಿನಿಧಿಗಳು ಬಾರದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಚಿಂತನೆ ನಡೆಸಿದ್ದಾರೆ. ಗ್ರಾಮದ ಹುತಾತ್ಮ ಯೋಧನ ನಿವಾಸದ ಎದುರು ಅಂತಿಮ ದರ್ಶನಕ್ಕೆ ಸಿದ್ದತೆ ನಡೆಸಲಾಗಿದ್ದು,  ಗ್ರಾಮದ ಶಾಲೆ ಪಕ್ಕದಲ್ಲಿ ಅಂತ್ಯಸಂಸ್ಕಾರ ಮಾಡಲು ನಿರ್ಧರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next