Advertisement

ಮಳೆ ನೀರಿನಲ್ಲೇ ಸೊಪ್ಪು ತರಕಾರಿ ತೊಳೆದರು?!

10:10 PM Apr 26, 2020 | Sriram |

ಮಂಗಳೂರು: ಕಾರ್‌ಸ್ಟ್ರೀಟ್‌ನಲ್ಲಿ ಬೀದಿ ಬದಿ ತರಕಾರಿ ವ್ಯಾಪಾರಿಗಳು ತಮ್ಮಲ್ಲಿದ್ದ ಸೊಪ್ಪನ್ನು ಮಳೆ ನೀರಿನಲ್ಲಿಯೇ ತೊಳೆಯುತ್ತಿ ದ್ದರೆನ್ನಲಾದ ಪೊಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು ಆ ವ್ಯಾಪಾರಿಗಳಿಗಾಗಿ ಪಾಲಿಕೆ ಅಧಿಕಾರಿಗಳು ಹುಡುಕಾಟ ನಡೆಸಿದ್ದಾರೆ.

Advertisement

ಶನಿವಾರ ಬೆಳಗ್ಗೆ ನಗರದಲ್ಲಿ ಮಳೆಯಾಗಿದ್ದು ಅದು ರಸ್ತೆಯಲ್ಲಿ ಶೇಖರಣೆಯಾಗಿತ್ತು. ಆ ವೇಳೆ ಓರ್ವ ತಳ್ಳುಗಾಡಿಯ ಪಕ್ಕದಲ್ಲೇ ರಸ್ತೆಯಲ್ಲಿ ಮಳೆ ನೀರಿನಲ್ಲಿ ಸೊಪ್ಪಿನ ಕಟ್ಟನ್ನು ತೊಳೆಯುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ರವಿವಾರ ಕಾರ್‌ಸ್ಟ್ರೀಟ್‌ ಪ್ರದೇಶದಲ್ಲಿ ತಳ್ಳುಗಾಡಿ ವ್ಯಾಪಾರಿಗಳಿಗಾಗಿ ಶೋಧ ನಡೆಸಿದರು. ಆದರೆ ಪತ್ತೆಯಾಗಿಲ್ಲ.

ಈ ಪ್ರಕರಣದ ಬಗ್ಗೆ ಈಗಾಗಲೆ ಪಾಲಿಕೆಯ ಫ್ಲೈಯಿಂಗ್‌ ಸ್ಕ್ವಾಡ್‌ಗೆ ಮಾಹಿತಿ ನೀಡಿದ್ದು ಅವರು ಪರಿಶೀಲಿಸುತ್ತಿದ್ದಾರೆ. ತಪ್ಪಿತಸ್ಥರ ವಿರುದ್ದ ಕ್ರಮ ತೆಗೆದುಕೊಳ್ಳಲಾಗುವುದು. ಕಾರ್‌ಸ್ಟ್ರೀಟ್‌ನಲ್ಲಿಯೂ ತಳ್ಳುಗಾಡಿಗಳ ನಿಲುಗಡೆ ನಿಷೇಧಿಸಲಾಗಿದೆ. ಎಂದು ಮಂಗಳೂರು ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next