Advertisement

3 ತಿಂಗಳಿಂದ ಬಾರದ ವೇತನವಿವಿಧೆಡೆ ತ್ಯಾಜ್ಯ ವಿಲೇವಾರಿ ಸ್ಥಗಿತ

11:27 AM May 03, 2018 | Team Udayavani |

ಬೆಂಗಳೂರು: ಬಿಬಿಎಂಪಿ ವತಿಯಿಂದ ಗುತ್ತಿಗೆ ಪೌರಕಾರ್ಮಿಕರಿಗೆ ಕಳೆದ ಮೂರು ತಿಂಗಳಿಂದ ಸಮರ್ಪಕವಾಗಿ ವೇತನ ಬಿಡುಗಡೆಯಾಗದ ಪರಿಣಾಮ ನಗರದ ಹಲವೆಡೆ ತ್ಯಾಜ್ಯ ವಿಲೇವಾರಿ ಸ್ಥಗಿತಗೊಂಡಿದ್ದು, ಎಲ್ಲೆಂದರಲ್ಲಿ ಕಸದ ರಾಶಿ ಸೃಷ್ಟಿಯಾಗಿದೆ. 

Advertisement

ಬಿಬಿಎಂಪಿ ವತಿಯಿಂದ ನಗರದ 700 ಜನರಿಗೆ ಒಬ್ಬರಂತೆ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲಾಗಿದ್ದು, ಬಯೋಮೆಟ್ರಿಕ್‌ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಆದರೆ, ಕಳೆದ 3 ತಿಂಗಳಿಂದ ಕಾರ್ಮಿಕರ ಬ್ಯಾಂಕ್‌ ಖಾತೆಗೆ ವೇತನ
ಜಮಾ ಆಗಿಲ್ಲ. ಇದರಿಂದಾಗಿ ಕಾರ್ಮಿಕರು ತ್ಯಾಜ್ಯ ವಿಲೇವಾರಿ ಮಾಡುತ್ತಿಲ್ಲ. ಹಲವು ವಾರ್ಡ್‌ಗಳಲ್ಲಿ ಪೌರಕಾರ್ಮಿಕರು ಮನೆ ಮನೆಯಿಂದ ತ್ಯಾಜ್ಯ ಸಂಗ್ರಹಿಸುವುದನ್ನೂ ನಿಲ್ಲಿಸಿದ್ದಾರೆ. ಇದರಿಂದಾಗಿ ನಾಗರಿಕರು ತ್ಯಾಜ್ಯವನ್ನು ರಸ್ತೆ ಬದಿ ಹಾಗೂ ನಿವೇಶನಗಳಲ್ಲಿ ಎಸೆಯುತ್ತಿದ್ದಾರೆ. ಈ ಕಸದೊಂದಿಗೆ ಮಳೆ ನೀರು ಸೇರಿ ಕೊಳೆತು ದುರ್ವಾಸನೆ ಬೀರುತ್ತಿದೆ.

ನಗರದ ಕೆ.ಆರ್‌.ಮಾರುಕಟ್ಟೆ, ಕಲಾಸಿಪಾಳ್ಯ, ಮೆಜೆಸ್ಟಿಕ್‌, ರವೀಂದ್ರ ಕಲಾಕ್ಷೇತ್ರ, ಜೆ.ಸಿ.ರಸ್ತೆ ಸೇರಿದಂತೆ ಪಾಲಿಕೆಯ
ಕೇಂದ್ರ ಕಚೇರಿಗೆ ಕೂಗಳತೆ ದೂರದ ಹಲವಾರು ಭಾಗಗಳಲ್ಲಿ ಕಪ್ಪು ಸ್ಥಳಗಳ (ಬ್ಲಾಕ್‌ಸ್ಪಾಟ್‌) ಸಂಖ್ಯೆ
ಹೆಚ್ಚಾಗುತ್ತಿದ್ದು, ನಗರದಲ್ಲಿ ಮತ್ತೆ ತ್ಯಾಜ್ಯ ಸಮಸ್ಯೆ ಸೃಷ್ಟಿಯಾಗುವ ಆತಂಕ ಎದುರಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next