Advertisement

ತ್ಯಾಜ್ಯ ಸಂಸ್ಕರಣಾ ಘಟಕ: ನೋಟಿಸ್‌ ನೀಡಲು ಸೂಚನೆ

03:50 AM Feb 23, 2017 | Team Udayavani |

ನವದೆಹಲಿ: ಕೈಗಾರಿಕಾ ತ್ಯಾಜ್ಯಗಳನ್ನು ನದಿಗಳಿಗೆ ಬಿಡುಗಡೆ ಮಾಡುವ ಕ್ರಮಕ್ಕೆ ಸಂಬಂಧಿಸಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌, ಎಲ್ಲ ರಾಜ್ಯ ಸರ್ಕಾರಗಳಿಗೂ ಖಡಕ್‌ ಸಂದೇಶ ರವಾನಿಸಿದೆ. ಪ್ರಾಥಮಿಕ ರಾಸಾಯನಿಕ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲಾಗಿದೆಯೇ ಎಂದು ಪ್ರಶ್ನಿಸಿ ಕೈಗಾರಿಕಾ ಸಂಸ್ಥೆಗಳಿಗೆ ನೋಟಿಸ್‌ ಜಾರಿ ಮಾಡಿ ಎಂದು ಎಲ್ಲ ರಾಜ್ಯಗಳಿಗೂ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

Advertisement

ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಿದ್ದೀರಾ ಎಂದು ಎಲ್ಲ ಕೈಗಾರಿಕಾ ಸಂಸ್ಥೆಗಳಿಗೆ ನೋಟಿಸ್‌ ಜಾರಿ ಮಾಡಿ. ನೋಟಿಸ್‌ ನೀಡಿದ 3 ತಿಂಗಳ ಬಳಿಕ ಪ್ರತಿ ಘಟಕಕ್ಕೂ ತೆರಳಿ, ಪರಿಶೀಲಿಸಿ. ಒಂದು ವೇಳೆ, ನಿಯಮ ಉಲ್ಲಂ ಸಿದ್ದು ಕಂಡುಬಂದಲ್ಲಿ, ಅಂಥ ಕಾರ್ಖಾನೆಗಳಿಗೆ ವಿದ್ಯುತ್‌ ಪೂರೈಕೆ ಮಾಡದಂತೆ ಆಯಾ ವಿದ್ಯುತ್‌ ಪೂರೈಕೆ ಸಂಸ್ಥೆಗಳಿಗೆ ಸೂಚನೆ ನೀಡಿ. ಕಾರ್ಖಾನೆ ಕಾರ್ಯನಿರ್ವಹಣೆಗೆ ಅವಕಾಶವನ್ನೂ ನೀಡಬೇಡಿ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ಸಿಜೆಐ ಜೆ.ಎಸ್‌. ಖೆಹರ್‌ ನೇತೃತ್ವದ ಪೀಠ ಆದೇಶಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next