Advertisement

Water Canal: ನಾಲೆ ನೀರು ಕದ್ದರೆ 2 ವರ್ಷ ಜೈಲು, 2 ಲಕ್ಷ ರೂ. ದಂಡ!

12:46 AM Jul 23, 2024 | Team Udayavani |

ಬೆಂಗಳೂರು: ಯಾವುದೇ ನಾಲೆಯಿಂದ ಅನಧಿಕೃತವಾಗಿ ನೀರೆತ್ತುವವರ ವಿರುದ್ಧ ವಿಧಿಸಲಾಗುವ ಶಿಕ್ಷೆಯ ಪ್ರಮಾಣವನ್ನು ಹಲವು ಪಟ್ಟು ಹೆಚ್ಚಿಸು ವುದರ ಜತೆಗೆ ನಾಲೆಯ 500 ಮೀಟರ್‌ ವ್ಯಾಪ್ತಿಯಲ್ಲಿ ಬರುವ ಕೊಳವೆಬಾವಿ ಮತ್ತಿತರ ಎಲ್ಲ ಪ್ರಕಾರದ ಅಂತರ್ಜಲ ಮೂಲಗಳನ್ನು ನಿಗದಿತ ಅವಧಿಯಲ್ಲಿ ನೋಂದಣಿ ಕಡ್ಡಾಯಗೊಳಿಸಲು ಸರಕಾರ ನಿರ್ಧರಿಸಿದೆ.

Advertisement

“ಕರ್ನಾಟಕ ನೀರಾವರಿ (ತಿದ್ದುಪಡಿ) ಮಸೂದೆ-2024’ನ್ನು ಸೋಮವಾರ ಕೆಳಮನೆಯಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಮಂಡಿಸಿದರು. ನಾಲೆ/ ಕೊಳವೆಯನ್ನು ಚುಚ್ಚುವುದು ಅಥವಾ ಕತ್ತರಿಸುವುದು ಅಥವಾ ಇಳಿ ಗೊಳವೆಯನ್ನು ಸೇರಿಸುವಂತಹ ಕೃತ್ಯಗಳಿಗೆ ಪ್ರಸ್ತುತ 1 ವರ್ಷದ ಕಾರಾಗೃಹ ಶಿಕ್ಷೆ ಅಥವಾ 1,000 ರೂ. ಜುಲ್ಮಾನೆ ಇದೆ. ಇದಕ್ಕೆ ಸಂಬಂಧಿಸಿದ ಇತರ ಉಲ್ಲಂಘನೆಗಳಿಗೆ ಮತ್ತೆ 2 ತಿಂಗಳು ಸೆರೆವಾಸ ವಿಸ್ತರಣೆ ಅಥವಾ 500 ರೂ. ದಂಡ ಇತ್ತು. ಮಸೂದೆ ಅಂಗೀಕಾರಗೊಂಡ ಅನಂತರ 2 ವರ್ಷ ಜೈಲು ಅಥವಾ 2 ಲಕ್ಷ ರೂ. ದಂಡ ವಿಧಿಸಲಾಗು ತ್ತದೆ. ಇತರ ಉಲ್ಲಂಘನೆಗಳಿದ್ದರೆ 50 ಸಾವಿರದಿಂದ 1 ಲಕ್ಷ ರೂ. ವರೆಗೆ ದಂಡ ಯಾ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.

ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ
ಶ್ರೀರಂಗಪಟ್ಟಣ: ರೈತರ ಜೀವನಾಡಿಯಾಗಿರುವ ಕಾವೇರಿ ತಾಯಿಗೆ ಪುಣ್ಯ ಕ್ಷೇತ್ರ ಕಾಶಿಯಲ್ಲಿ ಮಾಡುವ ಗಂಗಾರತಿ ಮಾದರಿಯಲ್ಲಿ “ಕಾವೇರಿ ಆರತಿ’ ಮಾಡಲು ಚಿಂತಿಸಲಾಗುತ್ತಿದೆ ಎಂದು ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಬಗ್ಗೆ ಮಂಡ್ಯ ಹಾಗೂ ಕೊಡಗು ಜಿಲ್ಲೆಯ ಶಾಸಕರು, ಧಾರ್ಮಿಕ ದತ್ತಿ ಇಲಾಖೆ ಅ ಧಿಕಾರಿಗಳ ತಂಡ ರಚಿಸಿ ಕಾವೇರಿ ಆರತಿ ಪ್ರಾರಂಭಿಸಲು ಒಂದು ತಿಂಗಳೊಳಗೆ ವರದಿ ನೀಡಲು ತಿಳಿಸಲಾಗುವುದು. ಬಳಿಕ ಮುಖ್ಯಮಂತ್ರಿ ಜತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next