Advertisement

ರಾಜ್ಯದಲ್ಲಿ ನೀರಿನ ತುರ್ತು ಪರಿಸ್ಥಿತಿ

03:05 AM Jul 09, 2019 | Sriram |

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವುಂಟಾಗಿ ತುರ್ತು ಪರಿಸ್ಥಿತಿ ವಾತಾವರಣ ಉಂಟಾಗಿರುವ ನಡುವೆಯೇ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರ ಪರಿಸ್ಥಿತಿ ಗಂಭೀರವಾಗಿರುವುದರಿಂದ ರಾಜ್ಯ ಸರಕಾರ ‘ತುರ್ತು ಪರಿಸ್ಥಿತಿ ಅವಧಿ’ ಎಂದು ಘೋಷಿಸಿದೆ.

Advertisement

ಬರಪೀಡಿತ ಎಂದು ಘೋಷಿಸಿರುವ ಮತ್ತು ಇನ್ನು ಮುಂದೆ ಘೋಷಿಸಬಹುದಾದ ಜಿಲ್ಲೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜು. 8ರಿಂದ 31ರ ವರೆಗೆ ಕುಡಿಯುವ ನೀರು ಸಂಬಂಧಿತ ತುರ್ತು ಕಾಮಗಾರಿಗಳನ್ನು ಕೂಡಲೇ ಕೈಗೊಂಡು ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಿ, ಸಾರ್ವಜನಿಕರಿಗೆ ಕುಡಿಯುವ ನೀರಿನ್ನು ಸರಬರಾಜು ಮಾಡಬೇಕು. ಇದಕ್ಕಾಗಿ ಪಾರದರ್ಶಕತೆ ಅಧಿನಿಯಮದಿಂದ ವಿನಾಯಿತಿಯನ್ನೂ ನೀಡಲಾಗಿದೆ ಎಂದು ತಿಳಿಸಲಾಗಿದೆ.

ಎಸ್‌ಎಫ್ಸಿ ಅನುದಾನದಡಿ ನಗರಾಭಿವೃದ್ಧಿ ಇಲಾಖೆಯು ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಿಡುಗಡೆ ಮಾಡಿರುವ ಮೊತ್ತದಲ್ಲಿ ಕಾಮಗಾರಿ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next