Advertisement

ಡ್ಯಾಂನಿಂದ 3 ಪಟ್ಟಣ, 45 ಗ್ರಾಮಕ್ಕೆ ನೀರು

01:06 PM Jul 10, 2019 | Team Udayavani |

ಬಂಗಾರಪೇಟೆ: ತಾಲೂಕು, ಕೋಲಾರ, ಮಾಲೂರು ಪಟ್ಟಣ ಮತ್ತು 40 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ 240 ಕೋಟಿ ರೂ. ವೆಚ್ಚದ ಯರಗೋಳ್‌ ಅಣೆಕಟ್ಟು ನಿರ್ಮಾಣವನ್ನು ಕೇಂದ್ರ ಆರ್ಥಿಕ ಇಲಾಖೆ ಜಂಟಿ ಕಾರ್ಯದರ್ಶಿ ಋತ್ವಿಕ್‌ ಪಾಂಡೆ ಪರಿಶೀಲನೆ ನಡೆಸಿದರು.

Advertisement

ಯರಗೋಳ್‌ ಅಣೆಕಟ್ಟು ಕಾಮಗಾರಿ 13 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಪ್ರಶ್ನಿಸಿದರು. ಇದಕ್ಕೆ ಅಧಿಕಾರಿಗಳು ಕೇಂದ್ರ ಸರ್ಕಾರದ ಅನುದಾನದಲ್ಲಿ ನಿರ್ಮಾಣ ಮಾಡುತ್ತಿರುವ ಅಣೆಕಟ್ಟಿಗೆ ಅಗತ್ಯ ಜಮೀನು ವಶಪಡಿಸಿಕೊಳ್ಳಲು ವಿಳಂಬವಾಯಿತು. ವರ್ಷದಿಂದ ಕಾಮಗಾರಿ ವೇಗವಾಗಿ ನಡೆಯುತ್ತಿದ್ದು, ಮುಂದಿ 6 ತಿಂಗಳೊಳಗಾಗಿ ಮುಗಿಸುವ ಬಗ್ಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದರು.

ಎರಡು ವರ್ಷ ಪೂರೈಕೆ: ಯರಗೋಳ್‌ ನೀರಾವರಿ ಯೋಜನೆಯಿಂದ 500 ಎಂಸಿಎಫ್ಟಿ ನೀರು ಸಿಗಲಿದೆ. ಡ್ಯಾಂ ತುಂಬಿ ಹರಿದರೆ 375 ಎಕರೆ ಭೂ ಪ್ರದೇಶವು ಮುಳಗಡೆಯಾಗಲಿದೆ. ಒಮ್ಮೆ ತುಂಬಿದರೆ ಕನಿಷ್ಠ ಎರಡು ವರ್ಷ ಕುಡಿಯುವ ನೀರು ಪೂರೈಕೆ ಮಾಡಬಹುದಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪರಿಹಾರ ವಿತರಣೆ: ಯರಗೋಳ್‌ ಡ್ಯಾಂ ನಿರ್ಮಾಣಕ್ಕೆ 375 ಎಕರೆ ಭೂ ಪ್ರದೇಶವನ್ನು ವಶಪಡಿಸಕೊಳ್ಳಲಾಗಿದೆ. ರೈತರಿಂದ 95 ಎಕರೆ, ಅರಣ್ಯ ಇಲಾಖೆಯಿಂದ 154 ಎಕರೆ ಮತ್ತು 126 ಎಕರೆ ಸರ್ಕಾರಿ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ. ರೈತರಿಗೆ ಪರಿಹಾರವಾಗಿ ಒಟ್ಟು 5.19 ಕೋಟಿ ರೂ. ಬಿಡುಗಡೆ ಮಾಡಿ ಸಮಸ್ಯೆ ಬಗೆಹರಿಸಲಾಗಿದೆ ಎಂದು ವಿವರಿಸಿದರು.

ತಾಂತ್ರಿಕತೆ ಅಳವಡಿಸಿಕೊಳ್ಳಿ: ಯರಗೋಳ್‌ ಅಣೆಕಟ್ಟನ್ನು ಎರಡು ಬೆಟ್ಟಗಳ ಮಧ್ಯೆ ಅಡ್ಡಲಾಗಿ ನಿರ್ಮಾಣ ಮಾಡಲಾಗುತ್ತಿದ್ದು, 414 ಮೀಟರ್‌ ಉದ್ದ, 30 ಮೀಟರ್‌ ಎತ್ತರ ಇದೆ. ಡ್ಯಾಂ ನಿರ್ಮಾಣ ವೇಳೆಗೆ ನೀರು ಪೂರೈಕೆಗೆ ಅಗತ್ಯವಾದ ತಾಂತ್ರಿಕತೆಗಳನ್ನು ಅಳವಡಿಸಲಾಗುವುದೆಂದು ಆಧಿಕಾರಿಗಳು ತಿಳಿಸಿದರು.

Advertisement

ಒಟ್ಟು 240 ಕೋಟಿ ರೂ. ಅನುದಾನದಲ್ಲಿ ಪೈಪ್‌ಲೈನ್‌ 80 ಕೋಟಿ ರೂ., ಅಣೆಕಟ್ಟು ಮತ್ತು ಸೇವಾ ರಸ್ತೆ ನಿರ್ಮಾಣಕ್ಕೆ 88 ಕೋಟಿ ರೂ. ಮತ್ತು ಅಣೆಕಟ್ಟುನಿಂದ ನೀರು ಪೂರೈಕೆ ಮಾಡಲು ಯಂತ್ರೋಪಕರಣಗಳ ಅಳವಡಿಸಿ ಕ್ರಮಕೈಗೊಳ್ಳುವುದಕ್ಕೆ 72 ಕೋಟಿ ರೂ. ಮಂಜೂರಾಗಿದೆ ಎಂದು ಹೇಳಿದರು.

45 ಗ್ರಾಮಗಳಿಗೆ ನೀರು ಪೂರೈಕೆ: ಬಂಗಾರಪೇಟೆ, ಮಾಲೂರು ಮತ್ತು ಕೋಲಾರ ನಗರಕ್ಕೆ ಕುಡಿಯುವ ಪೂರೈಕೆ ಮಾಡಲು ಯೋಜನೆ ಸಿದ್ಧಪಡಿಸಲಾಗಿದ್ದು, ಕುಡಿಯುವ ನೀರು ಪೂರೈಕೆಗೆ ನಗರ ನೀರು ಪೂರೈಕೆ ಮತ್ತು ಒಳಚರಂಡಿ ಇಲಾಖೆಯು ಕ್ರಮಕೈಗೊಳ್ಳಲಿದ್ದು, ಯರಗೋಳ್‌ನಿಂದ ಬಂಗಾರಪೇಟೆ, ಅಲ್ಲಿಂದ ಮಾಲೂರು ಮತ್ತು ಕೋಲಾರಕ್ಕೆ ಹಾದುಹೋಗುವ ಮಾರ್ಗ ಮಧ್ಯೆ ಬರುವ 45 ಗ್ರಾಮಗಳಿಗೆ ನೀರು ಪೂರೈಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ಒದಗಿಸಿದರು.

ಈ ಸಂದರ್ಭದಲ್ಲಿ ಜಿಪಂ ಸಿಇಒ ಜಿ.ಜಗದೀಶ್‌, ಯೋಜನಾಧಿಕಾರಿ ರವಿಚಂದ್ರ, ಪಂಚಾಯತ್‌ ರಾಜ್‌ ಕಾರ್ಯಪಾಲಕ ಎಂಜಿನಿಯರ್‌ ಎಚ್.ಡಿ.ಶೇಷಾದ್ರಿ, ತಾಪಂ ಇಒ ಎನ್‌.ವೆಂಕಟೇಶಪ್ಪ, ಮುಳಬಾಗಿಲು ತಾಪಂ ಇಒ ಮಂಜುನಾಥ್‌, ಸಾಮಾಜಿಕ ಅರಣ್ಯಾಧಿಕಾರಿ ದೇವರಾಜ್‌ ಮುಂತಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next