Advertisement
ನೀರಿಲ್ಲ, ನೀರಿಲ್ಲ ರಾಜಧಾನಿ ಬೆಂಗಳೂರಿನ ಪ್ರತಿ ಏರಿಯಾದಲ್ಲೂ ಕುಡಿಯಲು ನೀರಿಲ್ಲ.ಸಿಎಂ ಸಿದ್ದರಾಮಯ್ಯ ಅವರ #ಸ್ಲೀಪಿಂಗ್_ಸರ್ಕಾರ ಬಿಸ್ಲೇರಿ ನೀರು ಕುಡಿದು ಮಲಗುತ್ತಿದೆ. ಕೈ ತೊಳೆದುಕೊಳ್ಳಲು ಟ್ಯಾಂಕರ್ ನೀರು ಹಾಕಿಸಿಕೊಳ್ಳುತ್ತಿದೆ. ಆದರೆ, ಜನರಿಗೆ ಮಾತ್ರ ಕುಡಿಯಲು ಹನಿ ನೀರಿಗೂ ಹಾಹಾಕಾರ. 12 ದಿನಕ್ಕೊಮ್ಮೆ ನೀರು ಬರುತ್ತಿದೆ. ಟ್ಯಾಂಕರ್ ನೀರು ಬೇಕೆಂದರೆ ದುಬಾರಿ ಬೆಲೆ ನೀಡಬೇಕು. ಡಬಲ್ ಬೆಲೆ ಕೊಟ್ಟರೂ ನೀರು ಸಿಗುತ್ತಿಲ್ಲ.ಬ್ರ್ಯಾಂಡ್ ಬೆಂಗಳೂರನ್ನು ಟ್ರಬಲ್ ಬೆಂಗಳೂರು ಮಾಡಿದ್ದೇ ಬೆಂಗಳೂರು ನಗರಾಭಿವೃದ್ಧಿ ಹಾಗೂ ಜಲಸಂಪನ್ಮೂಲ ಸಚಿವಡಿ.ಕೆ.ಶಿವಕುಮಾರ್ ಅವರ ಸಾಧನೆ” ಎಂದು ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.