Advertisement
ಶುಕ್ರವಾರ ತಾಪಂ ಸಭಾಂಗಣದಲ್ಲಿ ಕಲಬುರಗಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಶಾಸಕರು, ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುವ ಗ್ರಾಮಗಳನ್ನು ಗುರುತಿಸಿ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕು. ಈ ನಿಟ್ಟಿನಲ್ಲಿ ನೀಲನಕ್ಷೆ ರೂಪಿಸಿ ಎಂದು ಸೂಚಿಸಿದರು.
ಪೂರ್ಣಗೊಳಿಸಲು ಮುತುವರ್ಜಿ ವಹಿಸಬೇಕೆಂದರು.ವಿದ್ಯುತ್ ಸಮಸ್ಯೆ ಕುರಿತು ಅನೇಕ ದೂರುಗಳು ಬಂದಿವೆ. ಆದ್ದರಿಂದ ವಿದ್ಯುತ್ ಸರಬರಾಜಿಗೆ ಸಮಯ ನಿಗದಿ ಮಾಡಿ. ಆ ಪ್ರಕಾರ ವಿದ್ಯುತ್ ಒದಗಿಸಿ. ಹೀಗೆ ಮಾಡಿದಲ್ಲಿ ರೈತರು ಬೆಳೆಗಳಿಗೆ ನೀರು ಬಿಡಲು ಸಹಕಾರಿಯಾಗುತ್ತದೆ.
Related Articles
ಸೇರಿಸಿ: ಪ್ರಕೃತಿ ವಿಕೋಪದಿಂದ ರೈತರ ಬೆಳೆ ನಷ್ಟವಾದಾಗ, ಇಳುವರಿ ಕಡಿಮೆಯಾದ ಸಂದರ್ಭದಲ್ಲಿ ಪರಿಹಾರ ಕಲ್ಪಿಸುವ ಪ್ರಧಾನ ಮಂತ್ರಿ ಫಸಲು ಬೀಮಾ ಯೋಜನೆಯಡಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಎಲ್ಲ ಹಳ್ಳಿಗಳ ಸರ್ವ ರೈತರನ್ನು ಒಳಪಡಿಸುವಂತೆ ಶಾಸಕರು ಕೃಷಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
Advertisement
ಕೇಂದ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಬೆಳೆವಿಮೆ ಪ್ರಿಮಿಯಂ ಮೊದಲಿಗಿಂದ ಅರ್ಧದಷ್ಟು ಕಡಿಮೆಗೊಳಿಸಿ ರೈತರಿಗೆ ಅನುಕೂಲ ಮಾಡಿದೆ. ಹೀಗಾಗಿ ಎಲ್ಲ ರೈತರನ್ನು ವಿಮಾ ವ್ಯಾಪ್ತಿಗೆ ಒಳಪಡಿಸಬೇಕು. ಶೇ.40ರಷ್ಟು ಮಾತ್ರ ರೈತರು ಸಾಲ ಪಡೆದಿರುತ್ತಾರೆ. ಉಳಿದ ಶೇ. 60ರಷ್ಟು ರೈತರನ್ನು ವಿಮೆಗೆ ಒಳಪಡಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ತಾಪಂ ಅಧ್ಯಕ್ಷ ಶಿವರಾಜ ಸಜ್ಜನ, ಕಾರ್ಯನಿರ್ವಾಹಕ ಲಕ್ಷ್ಮಣ ಬಿ. ಶೃಂಗೇರಿ ಮುಂತಾದವರಿದ್ದರು.