Advertisement
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಜಮಾಯಿಸಿದ ರೈತರು, ಬೆಂಗಳೂರು-ಮೈಸೂರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ಆಗಮಿಸಿದ ಡಿವೈಎಸ್ಪಿ ಚಂದ್ರಶೇಖರ್ ರೈತರ ಮನವೊಲಿಸಲು ಯತ್ನಿಸಿದರು. ಆದರೆ, ರೈತರು ರಸ್ತೆ ತಡೆಯನ್ನು ವಾಪಸ್ ಪಡೆಯಲು ಒಪ್ಪಲಿಲ್ಲ. ಈ ವೇಳೆ, 30ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಮಾಡಿದರು.
Related Articles
ಕೆಆರ್ಎಸ್ ಅಣೆಕಟ್ಟೆಗೆ ನೀಡಲಾಗಿರುವ ಭದ್ರತೆಯನ್ನು ಶನಿವಾರವೂ ಮುಂದುರಿಸಲಾಗಿದೆ. ಜತೆಗೆ, ಮಂಡ್ಯ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ಗಸ್ತು ಪಡೆಯನ್ನು ಹೆಚ್ಚಿಸಿದೆ.
Advertisement
ತಮಿಳುನಾಡಿಗೆ ನ್ಯಾಯ ಸಮ್ಮತ ನೀರು: ಸಚಿವ ಎಂ.ಬಿ.ಪಾಟೀಲವಿಜಯಪುರ: ಕೆಆರ್ಎಸ್ ಜಲಾಶಯದಲ್ಲಿ ನೀರಿನ ಸಂಗ್ರಹ ಆಧರಿಸಿ ನ್ಯಾಯ ಸಮ್ಮತವಾಗಿಯೇ ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ಜಲ ಸಂಪನ್ಮೂಲ ಸಚಿವ ಡಾ| ಎಂ.ಬಿ. ಪಾಟೀಲ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನೀರು ಹಂಚಿಕೆ ಸೂತ್ರದಂತೆ ನ್ಯಾಯಸಮ್ಮತವಾಗಿ ನೀರು ಬಿಡಲಾಗುತ್ತಿದೆ. ಪ್ರತಿ ವರ್ಷ ಜೂನ್ನಲ್ಲಿ 10 ಟಿಎಂಸಿ, ಜುಲೈನಲ್ಲಿ 34 ಟಿಎಂಸಿ ಹಾಗೂ ಆಗಸ್ಟ್ನಲ್ಲಿ 50 ಟಿಎಂಸಿ ನೀರು ಸೇರಿ ಮಳೆಗಾಲದ ಮೂರು ತಿಂಗಳಲ್ಲಿ 94 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಬೇಕಿದೆ. ಚೆನ್ನೈ ಸೇರಿ ತಮಿಳುನಾಡಿನ ಹಲವೆಡೆ ಕುಡಿಯುವ ನೀರಿನ ಸಂಕಷ್ಟ ನಿವಾರಣೆಗೆ ಜಲಾಶಯದ ನೀರಿನ ಮಟ್ಟ ಆಧರಿಸಿ ನದಿಗೆ ನೀರು ಹರಿಸಲಾಗುತ್ತಿದೆ. ಜೂನ್ ತಿಂಗಳಲ್ಲಿ ಮಳೆ ಕೊರತೆಯಿತ್ತು. ಹೀಗಾಗಿ, ಈಗ ನೀರು ಹರಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.