Advertisement

ಸೊರಗಿದ ನೇತ್ರಾವತಿ; ಹರಿಯುವ ಕುಮಾರಧಾರಾ

10:45 AM May 22, 2019 | Team Udayavani |

ಬೆಳ್ತಂಗಡಿ/ ಸುಬ್ರಹ್ಮಣ್ಯ: ನೇತ್ರಾವತಿ ನದಿಯಲ್ಲಿ ನೀರಿನ ಕೊರತೆ ಕಂಡುಬಂದಿರುವುದರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಇಳಿಮುಖವಾಗಿದೆ. ಇದೇ ವೇಳೆ ಕುಮಾರಧಾರೆಯಲ್ಲಿ ನೀರಿನ ಹರಿವು ಆರಂಭವಾಗಿರುವುದರಿಂದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರ ಹರಿವು ಕೂಡ ಉತ್ತಮವಾಗಿದೆ.

Advertisement

ಧರ್ಮಸ್ಥಳದಲ್ಲಿ ನೀರಿನ ಅಭಾವ ಇರುವುದರಿಂದ ಭಕ್ತರು ಪ್ರವಾಸವನ್ನು ಮುಂದೂಡುವುದು ಉತ್ತಮ ಎಂಬ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಮನವಿಗೆ ಭಕ್ತರು ಸ್ಪಂದಿಸಿದ್ದಾರೆ. ಹೆಚ್ಚಿನ ಪ್ರವಾಸಿಗರು ಕ್ಷೇತ್ರದ ಕಚೇರಿಗೆ ದೂರವಾಣಿ ಕರೆ ಮಾಡಿ ನೀರಿನ ಅಭಾವದ ಕುರಿತು ಮಾಹಿತಿ ಪಡೆಯುತ್ತಿರೆ.  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾಮಾನ್ಯವಾಗಿ ಪ್ರತಿದಿನ 10ರಿಂದ 15 ಸಾವಿರ ಭಕ್ತರು ಭೇಟಿ ನೀಡುತ್ತಾರಾದರೆ ಮಂಗಳವಾರ ಭಕ್ತರ ಸಂಖ್ಯೆ 25 ಸಾವಿರದ ಆಸುಪಾಸಿನಲ್ಲಿತ್ತು.

ಕೊಲ್ಲೂರಿನಲ್ಲಿ ಭಕ್ತಸಾಗರ
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಮಂಗಳವಾರ 15 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದರು. 8 ಸಾವಿರ ಮಂದಿಮಧ್ಯಾಹ್ನ ಅನ್ನಪ್ರಸಾದ ಸ್ವೀಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next