Advertisement

ನೀರಿನ ಟ್ಯಾಂಕ್‌ ನಿರ್ಮಾಣಕ್ಕೆ ಗುದ್ದಲಿಪೂಜೆ

11:44 PM Feb 17, 2021 | Team Udayavani |

ವೆಲೆನ್ಸಿಯಾ: ಮಂಗಳೂರು ನಗರಕ್ಕೆ 24×7 ನೀರು ಸರಬರಾಜು ವ್ಯವಸ್ಥೆಯ ವಿತರಣ ಜಾಲ ಬಲಪಡಿಸುವಿಕೆಯ ಭಾಗವಾಗಿ ವೆಲೆನ್ಸಿಯಾದಲ್ಲಿ ನೀರಿನ ಟ್ಯಾಂಕ್‌ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್‌ ಗುದ್ದಲಿಪೂಜೆ ನೆರವೇರಿಸಿದರು.

Advertisement

ಈ ಕುರಿತು ಮಾತನಾಡಿದ ಶಾಸಕ ಕಾಮತ್‌ ಅವರು, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ಮನೆಗೂ ದಿನದ 24 ಗಂಟೆ ನೀರು ಸರಬರಾಜು ಮಾಡುವ ಕಾಮಗಾರಿ ಪ್ರಗತಿಯಲ್ಲಿದೆ. ಅದರ ಭಾಗವಾಗಿ ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು, ವೆಲೆನ್ಸಿಯಾ, ಫಳ್ನೀರ್‌, ಬೆಂದೂರ್‌ ವಾರ್ಡ್‌ ಗಳಿಗೆ ನೀರು ಸರಬರಾಜು ಮಾಡುವ ಸಲುವಾಗಿ ಟ್ಯಾಂಕ್‌ ನಿರ್ಮಾಣಕ್ಕೆ 3.75 ಕೋ.ರೂ. ಅನುದಾನ ಮೀಸಲಿಡಲಾಗಿದೆ ಎಂದರು.

ಪಾಲಿಕೆಯ ಮೇಯರ್‌ ದಿವಾಕರ್‌ ಪಾಂಡೇಶ್ವರ, ಸಿಎಸ್‌ಐ ಬಿಷಪ್‌ ರೈಟ್‌ ರೆ| ಮೋಹನ್‌ ಮನೋರಾಜ್‌, ಪಾಲಿಕೆ ಸ್ಥಾಯೀ ಸಮಿತಿ ಅಧ್ಯಕ್ಷ ಜಗದೀಶ್‌ ಶೆಟ್ಟಿ ಬೋಳೂರು, ಪಾಲಿಕೆಯ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್‌ ಮಿಜಾರ್‌, ಪಾಲಿಕೆ ಸದಸ್ಯರಾದ ಜೆಸಿಂತಾ ವಿಜಯ ಆಲ್ಫೆ†ಡ್‌, ಸಂದೀಪ್‌ ಗರೋಡಿ, ವೀಣಾ ಮಂಗಳ, ಭಾನುಮತಿ, ರೇವತಿ, ಭರತ್‌ ಸೂಟರ್‌ಪೇಟೆ, ಪಾಲಿಕೆ ನಾಮ ನಿರ್ದೇಶಿತ ಸದಸ್ಯ ಭಾಸ್ಕರ್‌ ಚಂದ್ರ ಶೆಟ್ಟಿ, ಬಿಜೆಪಿಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

15 ಲಕ್ಷ ಲೀಟರ್‌ ಸಾಮರ್ಥ್ಯ
ಈ ಟ್ಯಾಂಕ್‌ 15 ಲಕ್ಷ ಲೀಟರ್‌ ಸಾಮರ್ಥ್ಯ ಹೊಂದಲಿದ್ದು, 1,538 ಮನೆಗಳಿಗೆ ಇಲ್ಲಿಂದ ನೀರು ಸರಬರಾಜು ಮಾಡಲಾಗುತ್ತದೆ. ಬೇಸಗೆಯ ಆರಂಭದಲ್ಲಿ ಕುಡಿಯುವ ನೀರಿನ ಅಭಾವ ಎದುರಿಸುವ ಮಂಗಳೂರಿಗೆ ಇದು ಬಹಳಷ್ಟು ಉಪಕಾರಿಯಾಗಲಿದೆ. ಟ್ಯಾಂಕ್‌ ನಿರ್ಮಾಣಕ್ಕೆ ಸ್ಥಳಾವಕಾಶ ಒದಗಿಸಿದ ವೆಲೆನ್ಸಿಯಾ ಚರ್ಚ್‌ನ ಧರ್ಮಗುರುಗಳಿಗೆ ಶಾಸಕರು ಕೃತಜ್ಞತೆ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next