Advertisement

ನೀರಿನ ಟ್ಯಾಂಕ್‌ ಕಾಮಗಾರಿ ಕಳಪೆ: ಹೊಸ್ಸುರಕರ್‌ ದೂರು

09:57 AM Nov 06, 2021 | Team Udayavani |

ಚಿತ್ತಾಪುರ: ಪಟ್ಟಣದ ಹೌಸಿಂಗ್‌ ಬೋರ್ಡ್‌ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿದ್ದ ಮೇಲ್ಮಟ್ಟದ ನೀರಿನ ಟ್ಯಾಂಕ್‌ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದಲ್ಲಿ ನಡೆದಿದೆ. ಆದ್ದರಿಂದ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ದೀಪಕ್‌ ಹೊಸ್ಸುರಕರ್‌ ಕರ್ನಾಟಕ ನೀರು ಮತ್ತು ಒಳಚರಂಡಿ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ಸಲ್ಲಿಸಿದ್ದಾರೆ.

Advertisement

ಗೃಹ ಮಂಡಳಿ ಬಡಾವಣೆ ನಿವಾಸಿಗಳಿಗೆ ಕುಡಿಯುವ ನೀರು ಸರಬರಾಜಿಗಾಗಿ ನಿರ್ಮಾಣ ಆಗುತ್ತಿರುವ ಮೇಲ್ಮಟ್ಟದ ನೀರಿನ ಟ್ಯಾಂಕ್‌ ಕಾಮಗಾರಿ ಪ್ರಾರಂಭದಲ್ಲೇ ಕಳಪೆ ಮಟ್ಟದಲ್ಲಿ ನಡೆದಿರುವುದು ಸ್ಪಷ್ಟವಾಗಿ ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next