Advertisement

ಬೈಕ್‌ಗಳಿಗೆ ನೀರಿನ ಟ್ಯಾಂಕರ್‌ ಢಿಕ್ಕಿ: ನಾಲ್ವರಿಗೆ ಗಾಯ

10:56 AM May 04, 2017 | Team Udayavani |

ಉಳ್ಳಾಲ: ತೊಕ್ಕೊಟ್ಟು ಚೆಂಬುಗುಡ್ಡೆ ಬಳಿ ನೀರಿನ ಟ್ಯಾಂಕರ್‌ ಮೂರು ಬೈಕ್‌ಗಳಿಗೆ ಢಿಕ್ಕಿ ಹೊಡೆದು ಸರಣಿ ಅಪಘಾತದಲ್ಲಿ ಇಬ್ಬರು ಬೈಕ್‌ ಸವಾರರು ಗಂಭೀರ ಗಾಯಗೊಂಡರೆ, ಇಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

Advertisement

ಬೈಕ್‌ ಸವಾರರಾದ ಅನ್ಸಾರ್‌ ಮತ್ತು ಆನಂದ ಅವರ ಸ್ಥಿತಿ ಗಂಭೀರವಾಗಿ ಗಾಯಧಿಗೊಂಡಧಿವರು.  ಹರೀಶ್‌ ಮತ್ತು ಮುಸ್ತಾಫ‌ ಅವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ಬಬ್ಬುಕಟ್ಟೆ ಕಡೆಯಿಂದ ತೊಕ್ಕೊಟ್ಟು ಕಡೆ ನೀರು ಸಾಗಿಸುತ್ತಿದ್ದ ಟ್ಯಾಂಕರ್‌ ವಾಹನವೊಂದನ್ನು ಓವರ್‌ಟೇಕ್‌ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಮೂರು ಬೈಕ್‌ಗಳಿಗೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭದಲ್ಲಿ ಬೈಕ್‌ಗಳಲ್ಲಿ ಸಂಚರಿಸುತ್ತಿದ್ದ ನಾಲ್ವರು ಗಾಯಗೊಂಡಿದ್ದು, ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಉಳ್ಳಾಲ ಪೊಲೀಸರು ಅಪಘಾತ ಎಸಗಿದ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next