Advertisement

ಕೃಷ್ಣಾಗೆ ನೀರು; ಮಹಾರಾಷ್ಟ್ರ ಸಿಎಂ ಭೇಟಿಗೆ ಸಮಯ ಕೇಳಿದ ಎ‍ಚ್ಡಿಕೆ

02:36 AM May 30, 2019 | Team Udayavani |

ಬೆಂಗಳೂರು: ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ನೀರಿನ ಸಮಸ್ಯೆಗೆ ಸ್ಪಂದಿಸಲು ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ ನೀರು ಬಿಡಿಸುವ ಸಂಬಂಧ ಚರ್ಚಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಭೇಟಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಮಯ ಕೇಳಿದ್ದಾರೆ.

Advertisement

ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹಾಗೂ ವಿಧಾನ ಪರಿಷತ್‌ ಪ್ರತಿಪಕ್ಷದ ಮುಖ್ಯ ಸಚೇತಕ ಮಹಾಂತೇಶ್‌ ಕವಠಗಿ ಮಠ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ತೀವ್ರ ಬರ ಪರಿಸ್ಥಿತಿ ಇರುವುದರಿಂದ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ 4 ಟಿಎಂಸಿ ನೀರು ಹರಿಸುವಂತೆ ಮಹಾರಾಷ್ಟ್ರ ಸಿಎಂಗೆ ಮನವಿ ಮಾಡುವಂತೆ ಕೇಳಿಕೊಂಡಿದ್ದರು.

ಬೆಳಗಾವಿ ಜಿಲ್ಲಾ ಮುಖಂಡರ ಮನವಿ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯವರು ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫ‌ಡ್ನವಿಸ್‌ ಅವರನ್ನು ಭೇಟಿ ಮಾಡಿ ಚರ್ಚಿಸಲು ಸಮಯ ಕೇಳಿದ್ದಾರೆ. ನೀರಿನ ಸಮಸ್ಯೆಯಾಗುವ ಪ್ರದೇಶದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ ಮಾಡುವ ಕುರಿತಂತೆ ಚರ್ಚಿಸಲು ಆ ಭಾಗದ ಮುಖಂಡರ ಸಭೆ ಕರೆಯುವುದಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next