Advertisement

Wayanad Landslide; ಗುಡ್ಡ ಕುಸಿತದಲ್ಲಿ ಚಾಮರಾಜನಗರ ಮೂಲದ ಇಬ್ಬರು ಸಾವು

11:16 PM Jul 30, 2024 | Team Udayavani |

ಚಾಮರಾಜನಗರ: ಕೇರಳ ವಯನಾಡು ಗುಡ್ಡ ಕುಸಿತ ಪ್ರಕರಣದಲ್ಲಿ ಚಾಮರಾಜನಗರ ಮೂಲದ ಇಬ್ಬರು ಮೃತಪಟ್ಟಿದ್ದಾರೆ.

Advertisement

ಜಿಲ್ಲೆಯ ಮೂಲದ ಕೇರಳದ ವಯನಾಡು ಜಿಲ್ಲೆಯ ಮೇಪ್ಪಾಡಿಯಲ್ಲಿ ನೆಲೆಸಿದ್ದ ಪುಟ್ಟಸಿದ್ದಶೆಟ್ಟಿ (62) ಹಾಗೂ ರಾಣಿ ಮದರ್ (55) ಎಂಬುವವರು ಮೃತರು.

ಘಟನೆ ನಡೆದ ಸ್ಥಳಕ್ಕೆ ಗುಂಡ್ಲುಪೇಟೆ ತಹಶೀಲ್ದಾರ್ ರಮೇಶ್ ಬಾಬು ತೆರಳಿದ್ದು ಈ ವಿಷಯವನ್ನು ಖಚಿತಪಡಿಸಿದ್ದಾರೆ.

ಈ ಇಬ್ಬರು ಮೂಲ ಚಾಮರಾಜನಗರದವರಾಗಿದ್ದು ಅನೇಕ ವರ್ಷಗಳಿಂದ ಮೇಪ್ಪಾಡಿ ಪ್ರದೇಶದಲ್ಲಿ ನೆಲೆಸಿದ್ದರೆಂದು ತಿಳಿದುಬಂದಿದೆ.

ಗುಂಡ್ಲುಪೇಟೆ ತಾಲೂಕಿನ ತ್ರಯಂಬಕಪುರದ ಸ್ವಾಮಿ ಸಣ್ಣ ಪುಟ್ಟ ಗಾಯಗಳೊಡನೆ ಪಾರಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next