Advertisement

Wayanad Tragedy: ಕೋಮು ಸಂದೇಶ ರವಾನೆ; ನಿರೀಕ್ಷಣ ಜಾಮೀನು

11:21 PM Aug 23, 2024 | Team Udayavani |

ಪುತ್ತೂರು : ವಯನಾಡಿನಲ್ಲಿ ಸಂಭವಿಸಿದ್ದ ಭೂಕುಸಿತ ದುರಂತಕ್ಕೆ ಸಂಬಂಧಿಸಿ ವಾಟ್ಸಪ್‌ನಲ್ಲಿ ಕೋಮುದ್ವೇಷ ಹುಟ್ಟಿಸುವ ಸಂದೇಶ ರವಾನಿಸಿದ ಪ್ರಕರಣದ ಆರೋಪಿಗೆ ಪುತ್ತೂರು ಜಿಲ್ಲಾ ನ್ಯಾಯಾಲಯ ನಿರೀಕ್ಷಣ ಜಾಮೀನು ಮಂಜೂರು ಮಾಡಿದೆ.

Advertisement

ಕೆಲವು ಗ್ರೂಪ್‌ಗ್ಳಲ್ಲಿ ಒಂದು ಸಮುದಾಯದ ವಿರುದ್ಧ ಪೋಸ್ಟ್‌ ಮಾಡಿ ಕೋಮು ದ್ವೇಷ ಭಾವನೆ ಹುಟ್ಟಿಸುವ, ಸಮುದಾಯಗಳ ನಡುವೆ ವೈಮನಸ್ಸು ಉಂಟು ಮಾಡಿ ಸಾರ್ವಜನಿಕ ನೆಮ್ಮದಿಗೆ ಭಂಗ ತರಲು ಪ್ರಯತ್ನಿಸಿದ್ದಾರೆ ಎಂದು ಡಾ| ಪ್ರವೀಣ್‌ ಪಾರೆ, ಅಖೀಲ್‌ ಮತ್ತು ಶರತ್‌ ಮಾಡಾವು ವಿರುದ್ಧ ಪ್ರಕರಣ ದಾಖಲಾಗಿತ್ತು.

ಆರೋಪಿಗಳ ಪೈಕಿ ಶರತ್‌ ಮಾಡಾವು ಅವರ ಪರ ವಕೀಲರು ಸಲ್ಲಿಸಿದ ಮಧ್ಯಾಂತರ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಶರತ್‌ ವಿರುದ್ಧ ಯಾವುದೇ ಬಲವಂತದ ಕ್ರಮ ಜರಗಿಸದಂತೆ ಪೋಲಿಸರಿಗೆ ಆದೇಶಿಸಿತ್ತು. ಈಗ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next