Advertisement

ಪ.ಬಂ. ಪಂ.ಚುನಾವಣೆ: ಬಿಜೆಪಿ ನಾಮಪತ್ರ ಸಲ್ಲಿಕೆಗೆ ನಿರ್ಬಂಧ ?

12:28 PM Apr 05, 2018 | udayavani editorial |

ಹೊಸದಿಲ್ಲಿ : ಮುಂಬರುವ ಪಂಚಾಯತ್‌ ಚುನಾವಣೆಗೆ ನಾಮಪತ್ರ ಸಲ್ಲಿಸಲು ತನ್ನ ಪಕ್ಷದ ಅಭ್ಯರ್ಥಿಗಳಿಗೆ ಬಿಡಲಾಗುತ್ತಿಲ್ಲ ಎಂದಿರುವ ಪಶ್ಚಿಮ ಬಂಗಾಲದ ಬಿಜೆಪಿ ನಾಯಕರೋರ್ವರು ನ್ಯಾಯಾಲಯದ ಸಹಾಯ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಲೇರಿದ್ದಾರೆ. 

Advertisement

ಎಪ್ರಿಲ್‌ 9 ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿರುವುದರಿಂದ ಬಿಜೆಪಿ ಅಭ್ಯರ್ಥಿಗಳಿಗೆ ನಾಮ ಪತ್ರ ಸಲ್ಲಿಸುವುದಕ್ಕೆ ಅನುಕೂಲ ಮಾಡಿಕೊಡುವಂತೆ ಆಗ್ರಹಿಸಿ ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಸಲ್ಲಿಸಿರುವ ಅರ್ಜಿಯನ್ನು ನಾಳೆ ಶುಕ್ರವಾರ ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ವರಿಷ್ಠ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಎ ಎಂ ಖಾನ್‌ವಿಲ್ಕರ್‌ಮತ್ತು ಡಿ ವೈ ಚಂದ್ರಚೂಡ್‌ ಅವರನ್ನು ಒಳಗೊಂಡ ಪೀಠವು ಒಪ್ಪಿರುವುದಾಗಿ ತಿಳಿದು ಬಂದಿದೆ. 

ಬಿಜೆಪಿ ನಾಯಕರ ವಕೀಲೆ ಐಶ್ವರ್ಯಾ ಭಾಟಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಪುರಸ್ಕರಿಸಿದ ಸುಪ್ರೀಂ ಪೀಠ, “ನಾವು ನಾಳೆ ಈ ಅರ್ಜಿಯ ವಿಚಾರಣೆಯನ್ನು ಕೈಗೊಳ್ಳುವೆವು’ ಎಂದು ಹೇಳಿತು. 

Advertisement

Udayavani is now on Telegram. Click here to join our channel and stay updated with the latest news.

Next