Advertisement

ಕೋವಿಡ್ ಸಾವಿನ ಪ್ರಮಾಣ ಶೇ.1ಕ್ಕಿಂತ ಕೆಳಗಿಳಿಸುವ ಗುರಿ ಹೊಂದಿದ್ದೇವೆ: ಸಚಿವ ಸುಧಾಕರ್

03:27 PM Sep 10, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸಾವಿನ ಪ್ರಮಾಣ ಶೇ. 1.62 ರಷ್ಟಿದ್ದು, ಮುಂದಿನ ದಿನಗಳಲ್ಲಿ ಈ ಪ್ರಮಾಣವನ್ನು ಶೇ.1 ಕ್ಕಿಂತ ಕೆಳಗಿಳಿಸುವ ಗುರಿ ಹೊಂದಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

Advertisement

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಗುರುವಾರ ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಂದೆ ತಾಯಿಗಿಂತ ದೊಡ್ಡ ಜವಾಬ್ದಾರಿ ನಿಬಾಯಿಸಬೇಕಾಗುತ್ತದೆ. ಮಕ್ಕಳಿಗೆ‌ ಕೇವಲ ಪಠ್ಯದಲ್ಲಿನ ಶಿಕ್ಷಣ ಕೊಡುವುದಷ್ಟೇ ಶಿಕ್ಷಕರ ಜವಾಬ್ದಾರಿ ಅಲ್ಲ. ಮಕ್ಕಳನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಗುಣ, ಸಂಸ್ಕಾರ ನೀಡುವುದು ಅವರ ಜವಾಬ್ದಾರಿ. ನಿಮ್ಮ ನಡೆ, ವಿದ್ಯಾರ್ಥಿಗಳಲ್ಲಿ ಪ್ರತಿಬಿಂಬಿಸಿದಾಗ ಮಾತ್ರ ನಿಮ್ಮ ವೃತ್ತಿ ಬದುಕು ಸಾರ್ಥಕವಾಗಲು ಸಾಧ್ಯ ಎಂದರು.

ಇದನ್ನೂ ಓದಿ: ಮತ್ತೆ ಗರಿಗೆದರಿದ ಸಚಿವ ಸಂಪುಟ ವಿಸ್ತರಣೆ ಚರ್ಚೆ: ಕೆಲವೇ ದಿನಗಳಲ್ಲಿ ಬಿಎಸ್ ವೈ ದೆಹಲಿಗೆ

ನೀವೆಲ್ಲರು ಹಗಲಿರುಳು ಶ್ರಮಿಸಿದ ಕಾರಣ ಇಂದು ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣದಲ್ಲಿದೆ. ರಾಜ್ಯದಲ್ಲಿ‌ ಸಾವಿನ ಪ್ರಮಾಣ ಶೇ.1.62 ರಷ್ಟಿದ್ದು, ಕೆಲವೇ ದಿನಗಳಲ್ಲಿ ಇದನ್ನು ಶೇ. 1 ಕ್ಕಿಂತ ಕೆಳಗಿಸುವ ಗುರಿ ಹೊಂದಿದ್ದೇವೆ ಎಂದರು.

Advertisement

ವೈದ್ಯಕೀಯ ಶಿಕ್ಷಣ ಇಲಾಖೆ ಬೋಧಕ ಬೋಧಕೇತರ ಸಿಬ್ಬಂದಿಯ ಬಹುದಿನಗಳ ಬೇಡಿಕೆಯಾದ ಪಿಂಚಣಿ ಯೋಜನೆ (ಎನ್‌ಪಿಎಸ್) ಯನ್ನು ಜಾರಿಗೊಳಿಸುವ ಮೂಲಕ ಸುಮಾರು 6 ಸಾವಿರ ಸಿಬ್ಬಂದಿಗೆ ಪ್ರಯೋಜನವಾಗಿದೆ. ಜೊತೆಗೆ  ಶೇ.40 ರಷ್ಟು ಶಿಷ್ಯ ವೇತನ ಹೆಚ್ಚಿಸುವುದು ಸೇರಿದಂತೆ ಕಳೆದ ಆರು ತಿಂಗಳಲ್ಲಿ ವೈದ್ಯ ಸಮೂಹಕ್ಕೆ ನಮ್ಮ ಸರಕಾರ ಸಾಕಷ್ಟು‌ ಕೊಡುಗೆ ನೀಡಿದೆ. ಆರ್ಥಿಕ ದುಸ್ಥಿತಿಯಲ್ಲೂ ನಮ್ಮ ಸರಕಾರ ವೈದ್ಯರ ನೆರವಿಗೆ ನಿಂತಿದೆ ಎಂದು ಸಚಿವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next