Advertisement

ಬಹುಮತ ಸಾಬೀತುಪಡಿಸಿಯೇ ಸಿದ್ಧ: ಸಿಎಂ ಬಿಎಸ್ ವೈ ವಿಶ್ವಾಸ

03:31 PM May 18, 2018 | Team Udayavani |

ಬೆಂಗಳೂರು: ನಾಳೆ ನಾವು ಸದನದಲ್ಲಿ ನೂರಕ್ಕೆ ನೂರರಷ್ಟು ಬಹುಮತ ಸಾಬೀತುಪಡಿಸುತ್ತೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಶನಿವಾರ ಸಂಜೆ 4ಗಂಟೆಗೆ ಬಹುಮತ ಸಾಬೀತುಪಡಿಸಬೇಕೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯ ವಿಧಾನಸಭೆ ಮುಖ್ಯ ಕಾರ್ಯದರ್ಶಿಗಳೊಂದಿಗೆ ಚರ್ಚೆ ನಡೆಸಿ ನಾಳೆ ವಿಧಾನಮಂಡಲ ಅಧಿವೇಶನಕ್ಕೆ ಕರೆ ನೀಡುವುದಾಗಿ ತಿಳಿಸಿದರು.

ಶನಿವಾರ ನಾಲ್ಕು ಗಂಟೆಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಬೇಕು. ಅಲ್ಲದೇ ವಿಶ್ವಾಸಮತ ಯಾಚನೆಗೂ ಮುನ್ನ ಎಲ್ಲಾ ಶಾಸಕರು ಪ್ರಮಾಣವಚನ ಸ್ವೀಕರಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ.

ವಿಶ್ವಾಸಮತದಲ್ಲಿ ಗೆಲುವು ಬಿಜೆಪಿ:

ನಾಳೆ ಸದನದಲ್ಲಿ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಬಹುಮತ ಪಡೆಯುವುದು ಖಚಿತ ಎಂದು ಬಿಜೆಪಿ ಮುಖಂಡರಾದ ಶೋಭಾ ಕರಂದ್ಲಾಜೆ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಕೆಎಸ್ ಈಶ್ವರಪ್ಪ ಸೇರಿದಂತೆ ಹಲವು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next