Advertisement

ಮುಸ್ಲಿಂ ಸಮುದಾಯ ಓಬಿಸಿಗೆ ಸೇರಿಸಲು ವಿರೋಧ: ಬಿಜೆಪಿ ಓಬಿಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮಣ್ ರಾವ್

11:44 AM Dec 16, 2020 | keerthan |

ಮೈಸೂರು: ದೇಶದಲ್ಲಿ ಮುಸ್ಲಿಂ ಸಮುದಾಯವು ಓಬಿಸಿ ಗೆ ಸೇರುವುದನ್ನು ವಿರೋಧಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರೀಯ ಓಬಿಸಿ ಮೋರ್ಚಾ ಅಧ್ಯಕ್ಷ  ಲಕ್ಷ್ಮಣ್ ರಾವ್ ಹೇಳಿದರು.

Advertisement

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಬಡವರಿಗೆ ಶೇ.10ರಷ್ಟು ಮೀಸಲಾತಿ ನೀಡಲು ಕೇಂದ್ರ ಮುಂದಾಗಿದೆ.  ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಹೆಚ್ಚಿನ ಒತ್ತಿ ನೀಡುತ್ತಿದೆ. ಜಸ್ಟಿಸ್ ರೋಹಿಣಿ ಆಯೋಗದ ಶಿಫಾರಸಿನ ಅನ್ವಯ ದೇಶದ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಅದರಲ್ಲೂ ಮೀನುಗಾರಿಕೆ ಸಮುದಾಯದವತರಿಗೆ ವಿಶೇಷ ಸವಲತ್ತು ನೀಡಲಾಗಿದೆ ಎಂದರು.

ಜಸ್ಟಿಸ್ ರೋಹಿಣಿ ಆಯೋಗ ನೀಡಿರುವ ವರದಿಯನ್ನು ದೇಶಾದ್ಯಂತ ವೈಜ್ಞಾನಿಕ ಸಮೀಕ್ಷೆ ನಡೆಸಿ ಲೋಕಸಭಾ ಹಾಗೂ ರಾಜ್ಯಸಭೆಗಳಲ್ಲಿ ಚರ್ಚಿಸಿ ಅನುಷ್ಠಾನ ಗೊಳಿಸುತ್ತೇವೆ. ಕಳೆದ 6 ವರ್ಷಗಳಲ್ಲಿ ಕೇಂದ್ರೀಯ ವಿದ್ಯಾಲಯ, ಕಾನೂನು ವಿದ್ಯಾಲಯ, ನವೋದಯ ಶಾಲೆ ಹಾಗೂ ಸೈನಿಕ ಶಾಲೆಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗದ 72 ಸಾವಿರ ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದಾರೆ. ಇದು 72 ವರ್ಷದ ಬಳಿಕ ದೇಶದಲ್ಲೇ ಬದಲಾವಣೆ ಕಾಣಲು ಸಾಧ್ಯವಾಗಿದೆ. ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಹಲವಾರು ಸಮುದಾಯದ ಎಲ್ಲ ಬಡವರಿಗೆ ಮೀಸಲಾತಿ ನೀಡಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು

Advertisement

Udayavani is now on Telegram. Click here to join our channel and stay updated with the latest news.

Next