Advertisement
ಆದರೆ, ನಮಗೆ ಪ್ರತ್ಯೇಕ ರಾಜ್ಯ ಅಲ್ಲ, ಅಭಿವೃದ್ಧಿ ಬೇಕು’ ಎಂದು ವಿಧಾನಪರಿಷತ್ತಿನ ಪಕ್ಷೇತರ ಸದಸ್ಯ ಬಸವನಗೌಡ ಪಾಟೀಲ್ ಯತ್ನಾಳ್ ತೀಕ್ಷ್ಣ ಮಾತುಗಳನ್ನಾಡಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಸಂತ್ರಸ್ತ ಕುಟುಂಬಗಳಿಗೆ ಏಕರೂಪ ಪರಿಹಾರ ಒದಗಿಸುವ ಕುರಿತು ನಿಯಮ 330 ಅಡಿಯಲ್ಲಿ ಪ್ರಸ್ತಾಪಿಸಲಾದ ವಿಷಯದ ಮೇಲೆ ಮಾತನಾಡಿ, “ನನ್ನದು ಅಖಂಡ ಕರ್ನಾಟಕದ ಕಲ್ಪನೆ. ಹಾಗಾಗಿ ಪ್ರತ್ಯೇಕ ರಾಜ್ಯ ಬೇಕಿಲ್ಲ. ಉತ್ತರ ಕರ್ನಾಟಕ ಭಾಗ ಅಭಿವೃದ್ದಿ ಆಗಿದ್ದಿದ್ದರೆ, ಯಾರೂ ಪ್ರತ್ಯೇಕ ರಾಜ್ಯ ಕೇಳುತ್ತಿರಲಿಲ್ಲ. ಅಭಿವೃದ್ಧಿ ಮಾಡದೇ ತಾವೇ ಅನ್ಯಾಯ ಮಾಡಿ, ಈಗ ನಮಗೆ ಅನ್ಯಾಯ ಆಗಿದೆ ಪ್ರತ್ಯೇಕ ರಾಜ್ಯ ಬೇಕು ಎಂದು ಉತ್ತರ ಕರ್ನಾಟಕ ಭಾಗದ ಕೆಲ ಜನಪ್ರತಿ ನಿಧಿಗಳು ಕೇಳುತ್ತಿರುವುದು ವಿಪರ್ಯಾಸ ಎಂದರು.
Advertisement
ನಮಗೆ ಪ್ರತ್ಯೇಕ ರಾಜ್ಯ ಅಲ್ಲ,ಅಭಿವೃದ್ಧಿ ಬೇಕು: ಯತ್ನಾಳ್
10:47 AM Jun 08, 2017 | |
Advertisement
Udayavani is now on Telegram. Click here to join our channel and stay updated with the latest news.