Advertisement

ಅಮಿತ್‌ ಶಾ ತಿಳಿವಳಿಕೆ ಪ್ರಶ್ನಿಸುವ ಸ್ಥಿತಿಯಲ್ಲಿ ನಾವಿಲ್ಲ: ಮಾಧುಸ್ವಾಮಿ

11:38 PM Aug 31, 2019 | Lakshmi GovindaRaj |

ಮಂಡ್ಯ: ರಾಜ್ಯದಲ್ಲಿ ಮೂವರು ಉಪ ಮುಖ್ಯಮಂತ್ರಿಗಳಿರುವುದು ನಿಜ. ಈ ವಿಚಾರವಾಗಿ ನಾವು ಅಮಿತ್‌ ಶಾ ಅವರ ತಿಳಿವಳಿಕೆ ಪ್ರಶ್ನಿಸುವ ಸ್ಥಿತಿಯಲ್ಲಿಲ್ಲ. ಮೇಲಿನವರು ಯಾವ ಕಾರಣಕ್ಕೆ ಮಾಡಿದ್ದಾರೆ ಅನ್ನೋ ವಿಚಾರ ಗೊತ್ತಿಲ್ಲ. ಅವರ ತೀರ್ಮಾನದಿಂದ ಪಕ್ಷಕ್ಕೆ ಒಳ್ಳೆಯದಾಗಲಿದೆ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರದ ಆಡಳಿತಾತ್ಮಕ ವಿಚಾರದಲ್ಲಿ ಒಬ್ಬೊಬ್ಬರ ಅಭಿಪ್ರಾಯಗಳು ಒಂದೊಂದು ರೀತಿ ಇರುತ್ತವೆ. ರಾಷ್ಟ್ರಮಟ್ಟದ ನಾಯಕರು ಯಾವುದೇ ತೀರ್ಮಾನಗಳನ್ನು ಕೈಗೊಂಡಾಗ ಅದರ ಹಿಂದಿನ ಉದ್ದೇಶ ಒಳ್ಳೆಯದಾಗಿರುತ್ತದೆ. ಅವರಿಗೆ ನಮಗಿಂತ ಹೆಚ್ಚು ತಿಳುವಳಿಕೆ ಇರುತ್ತದೆ ಎಂದು ಭಾವಿಸುತ್ತೇನೆ ಎಂದು ನಯವಾಗಿ ಉತ್ತರಿಸಿದರು.

ಸಚಿವ ಸ್ಥಾನ ಸಿಗದಿದ್ದಕ್ಕೆ ಭಿನ್ನಮತ ಉಂಟಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಚಿವ ಹುದ್ದೆ ಸಿಗದಿದ್ದಾಗ ಅತೃಪ್ತಿ ಭುಗಿಲೇಳುವುದು ಎಲ್ಲಾ ಪಕ್ಷಗಳಲ್ಲೂ ಸಾಮಾನ್ಯ ಸಂಗತಿ. ಮುಂದೆ ಅವರಿಗೆ ಅವಕಾಶಗಳು ಸಿಗುತ್ತವೆ. ಅಲ್ಲಿಯವರೆಗೆ ತಾಳ್ಮೆ ಇರಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next