Advertisement

ಯಾವುದೇ ರೀತಿಯಲ್ಲಿ ನಾವು ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ: ಯಡಿಯೂರಪ್ಪ

04:28 PM Jun 06, 2022 | Team Udayavani |

ಬೆಂಗಳೂರು: ರಾಜಸಭೆಯಲ್ಲಿ ಮೂರು ಸ್ಥಾನ ನಾವು ಗೆದ್ದೇ ಗೆಲ್ಲುತ್ತೇವೆ. ಯಾವುದೇ ರೀತಿಯಲ್ಲಿ ನಾವು ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಹೇಳಿಕೆ ನೀಡಿದ್ದಾರೆ.

Advertisement

ಪದವೀಧರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದೇನೆ. ಆ ಎಲ್ಲಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುವ ವಿಶ್ವಾಸ ನನಗಿದೆ. ಕಾಂಗ್ರೆಸ್ ನವರು ಹೇಳುವುದು, ಬೇರೆಯವರು ಹೇಳುವುದಕ್ಕೆ ಟೀಕೆ ಮಾಡಲು ಹೋಗುವುದಿಲ್ಲ. ಮೂರಕ್ಕೆ ಮೂರು ಸ್ಥಾನ ಗೆಲ್ಲುವುದು ಶತಸಿದ್ಧ. ಅದರಲ್ಲಿ ಯಾವುದೇ ಅನುಮಾನ ಯಾರಿಗೂ ಇಲ್ಲ ಎಂದರು.

ಲೆಹರ್ ಸಿಂಗ್ ಗೆ ದ್ವಿತೀಯ ಪ್ರಾಶಸ್ತ್ಯದ ಪೂರ್ಣ ಮತ, ಮೊದಲ ಪ್ರಾಶಸ್ತ್ಯದ ಹೆಚ್ಚುವರಿ ಮತ ಕೊಡಿಸಿದರೆ ಅದೇ ಸಾಕು ನಮಗೆ, ಬೇರೆ ಯಾವುದೇ ಮತ ಅಗತ್ಯವಿಲ್ಲ ಎಂದರು.

ಆತ್ಮ ಸಾಕ್ಷಿಯ ಮತಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ ಎಂದರು. ಕಾಂಗ್ರೆಸ್- ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಲ್ಲಿ ಬಿಜೆಪಿಗೆ ಸಮಸ್ಯೆಯಾಗುವ ವಿಚಾರಕ್ಕೆ , ಅನಗತ್ಯವಾಗಿ ನಾನ್ಯಾಕೆ ಅದರ ಬಗ್ಗೆ ಮಾತಾಡಲಿ ಎಂದ ಅವರು ಆರ್ ಎಸ್ ಎಸ್ ಚಡ್ಡಿ ಸುಡುವ ಕಾಂಗ್ರೆಸ್ ಅಭಿಯಾನದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next