Advertisement

ಅನೈತಿಕ ಎಂಬುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಅನ್ವಹಿಸುವ ಶಬ್ದ: ರವಿಕುಮಾರ್

10:36 AM Jun 08, 2022 | Team Udayavani |

ವಿಜಯಪುರ: ರಾಜ್ಯದಲ್ಲಿ ಅನೈತಿಕ ಸರ್ಕಾರವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ್ ಹೇಳಿಕೆ ಅಪಹಾಸ್ಯದಿಂದ ಕೂಡಿದೆ. ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ‌ಕೇರಳ ರಾಜ್ಯಗಳಲ್ಲಿ ಒಂದು ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರ ನಡೆಸುವ ಕಾಂಗ್ರೆಸ್ ಪಕ್ಷದ ನಾಯಕರಿಗೆ ರಾಜಕೀಯ ನೈತಿಕತೆ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾ‌ರ್‌ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಸಿದ್ದರಾಮಯ್ಯ,  ಡಿ.ಕೆ.ಶಿವಕುಮಾರ್ ಅವರಿಗೆ ಅನೈತಿಕ ಎಂಬ ಪದದ ಅರ್ಥ ಗೊತ್ತಿದೆಯಾ? ಕಾಂಗ್ರೆಸ್ ಪಕ್ಷದ ನಾಯಕರಿಗೆ ಯಾವ ನೈತಿಕತೆ ಇದೆ? ಅವರ ಪಕ್ಷದಲ್ಲಿ ಏನು ನೀತಿ ಇದೆ? ಅನೈತಿಕ ಎಂಬುದು ಕಾಂಗ್ರೆಸ್  ಪಕ್ಷಕ್ಕೆ ಮಾತ್ರ ಅನ್ವಹಿಸುವ ಶಬ್ದ. ನಾವು ನೀತಿ ಸಿದ್ಧಾಂತದ ಆಧಾರದ ಮೇಲೆ ಕೆಲಸ ಮಾಡುತ್ತಿದ್ದೇವೆ‌ ಎಂದರು.

ಇದನ್ನೂ ಓದಿ:ವಿಧಾನಸಭೆಗೆ ವಿಜಯೇಂದ್ರ ಸ್ಪರ್ಧೆ ಖಚಿತ: ಸಾಮೂಹಿಕ ನಾಯಕತ್ವದಲ್ಲಿ ಪ್ರಚಾರ:  ಬಿಎಸ್‌ವೈ

ಅಧಿಕಾರಕ್ಕಾಗಿ ಒಂದೊಂದು ರಾಜ್ಯದಲ್ಲಿ ಒಂದು ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷ ಹಾಗೂ ಆ ಪಕ್ಷದ ನಾಯಕರಿಗೆ ನೈತಿಕತೆ ಬಗ್ಗೆ ಮಾತನಾಡುವ ಯಾವ ನೈತಿಕತೆ ಇದೆ, ಇವರು ಯಾವ ನೀತಿ ಪಾಠ ಮಾಡುತ್ತಿದ್ದಾರೆ? ರಾಜಕೀಯ ನೈತಿಕತೆ, ಸಿದ್ಧಾಂತ, ವೇದಾಂತದ ಬಗ್ಗೆ ಅರಿಯಲು ಇವರೆಲ್ಲ ಇನ್ನೊಮ್ಮೆ ಪದವಿ ಶಿಕ್ಷಣ ಮಾಡಲಿ ಎಂದು ಕಿಡಿಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next