Advertisement

ಸಿದ್ದರಾಮಯ್ಯ ಕಾನೂನಿಗೆ ಗೌರವ ಕೊಡುತ್ತಾರೆಂಬ ವಿಶ್ವಾಸವಿದೆ: ಸಿಎಂ ಬೊಮ್ಮಾಯಿ

03:48 PM Jan 06, 2022 | Team Udayavani |

ಬೆಂಗಳೂರು: ಡಿಕೆಶಿ ಶಿವಕುಮಾರ್ ಬಿಡಿ, ಅವರು ಕೆಪಿಸಿಸಿ ಅಧ್ಯಕ್ಷರು, ನನ್ನ ಸ್ನೇಹಿತರು. ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದವರು. ಅವರು ಹಾಲಿ ವಿಪಕ್ಷ ನಾಯಕ. ಅವರಿಗೆ ಕಾನೂನು ಬಗ್ಗೆ ಗೊತ್ತಿದೆ. ಅವರು ಕಾನೂನಿಗೆ ಗೌರವ ಕೊಡುತ್ತಾರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ವ್ಯಂಗ್ಯವಾಗಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮಾರ್ಗಸೂಚಿ ಬಗ್ಗೆ ಚರ್ಚೆಯಾಗಿದೆ. ಹಲವು ಸಂಘ ಸಂಸ್ಥೆಗಳು ಈ ಬಗ್ಗೆ ಅಭಿಪ್ರಾಯ ಹೇಳಿದ್ದಾರೆ. ಆದರೆ ಸೋಂಕಿನ ರೂಪುರೇಷೆ ನೋಡಿ ಬಳಿಕ ತೀರ್ಮಾನ ಮಾಡೋಣ ಎಂದು ಚರ್ಚೆಯಾಗಿದೆ ಎಂದರು.

ಇದನ್ನೂ ಓದಿ:ನಮ್ಮ ನಾಯಕರು ನಿಮ್ಮಿಂದ ಬುದ್ದಿ ಹೇಳಿಸಿಕೊಳ್ಳಬೇಕಿಲ್ಲ: ಸಿದ್ದರಾಮಯ್ಯ ವಿರುದ್ಧ ರಾಜೀವ್ ಕಿಡಿ

Advertisement

Udayavani is now on Telegram. Click here to join our channel and stay updated with the latest news.

Next