Advertisement

‘ಕೃಷಿಯಿಂದ ಸ್ವಾವಲಂಬನೆ ಸಾಧ್ಯ’

08:40 AM Jul 27, 2017 | Team Udayavani |

ಪುಂಜಾಲಕಟ್ಟೆ: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಬಂಟ್ವಾಳ ತಾಲೂಕಿನ ವಗ್ಗ ವಲಯದ ವತಿಯಿಂದ ಕಜೆಕಾರು ಕಾರ್ಯಕ್ಷೇತ್ರದ ಪಾಂಡವರಕಲ್ಲು ಸಮುದಾಯ ಭವನದಲ್ಲಿ ವಲಯ ಮಟ್ಟದ ಸ್ವಉದ್ಯೋಗ ಕೃಷಿ ವಿಚಾರಸಂಕಿರಣ ಬುಧವಾರ ಜರಗಿತು. ಪ್ರಗತಿಪರ ಕೃಷಿಕ ಮಹಾಬಲ ಪೂಜಾರಿ ಅಂಬೆxàಲು ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯಿಂದ ಕೃಷಿಯ ಮೂಲಕ ಸೋದ್ಯೋಗಕ್ಕೆ ಹೆಚ್ಚಿನ ಆದ್ಯತೆ ನೀಡಿ ಮಾಹಿತಿ ಮಾರ್ಗದರ್ಶನ ನೀಡುತ್ತಿದ್ದಾರೆ. ಇದನ್ನು ಸಮರ್ಪಕವಾಗಿ ಬಳಸಿಕೊಂಡು ಅನುಷ್ಠಾನಗೊಳಿಸಿದಲ್ಲಿ  ಕೃಷಿ ಕಾರ್ಯದಲ್ಲಿ ಯಶಸ್ವಿಯಾಗಬಹುದು ಎಂದರು.

Advertisement

ಧ.ಗ್ರಾ. ಯೋಜನೆ ಧರ್ಮಸ್ಥಳದ ಯೋಜನಾಧಿಕಾರಿ ಕೃಷ್ಣಪ್ಪ ಪಿ. ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ದೂರದರ್ಶಿತ್ವದಿಂದ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕಳೆದ 33 ವರ್ಷಗಳಿಂದ ಕೃಷಿಕರಿಗೆ ಉತ್ತೇಜನ ನೀಡುತ್ತಿದ್ದು ಕೃಷಿಕರು ಸ್ವಾವಲಂಬಿಗಳಾಗಲು ಸಹಕಾರಿಯಾಗಿದೆ. ಪ್ರಸಕ್ತ ವರ್ಷವನ್ನು ಕೃಷಿ ಸ್ವಉದ್ಯೋಗ ವರ್ಷವನ್ನಾಗಿ ಘೋಷಿಸಿದ್ದಾರೆ. ಗ್ರಾಮೀಣ ಜನರು ಇದರ ಸದುಪಯೋಗವನ್ನು ಪಡೆಯಲು ಈ ರೀತಿಯ ವಿಚಾರ ಸಂಕಿರಣಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು. ಬಡಗಕಜೆಕಾರು ಗ್ರಾ.ಪಂ. ಅಧ್ಯಕ್ಷ ವಜ್ರಪೂಜಾರಿ ಬಾರ್ದೊಟ್ಟು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷಿ ಪ್ರಧಾನ ದೇಶದಲ್ಲಿ ನಾವು ಕೃಷಿಗೆ ಹೆಚ್ಚಿನ ಆದ್ಯತೆ ನೀಡಿ ಸ್ವಾವಲಂಬಿಗಳಾಗಬೇಕು. ಇದಕ್ಕೆ ಪೂರಕವಾಗಿರುವ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಕಜೆಕಾರು ಸಿಎ ಬ್ಯಾಂಕ್‌ ಅಧ್ಯಕ್ಷ, ಎಪಿಎಂಸಿ ಸದಸ್ಯ ಕೆ.ಹರಿಶ್ಚಂದ್ರ ಪೂಜಾರಿ ಅವರು ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಜನರು ಆರ್ಥಿಕವಾಗಿ ಅಭಿವೃದ್ಧಿ ಹೊಂದಿದ್ದಾರೆ ಎಂದು ಹೇಳಿದರು.

ಸ್ವಉದ್ಯೋಗ ವಿಚಾರಗೋಷ್ಠಿ
ಉಜಿರೆಯ ರುಡ್‌ಸೆಟ್‌ ಸಂಸ್ಥೆಯ ಉಪನ್ಯಾಸಕಿ ಅನುಸೂಯ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಕೃಷಿಗೆ ಪೂರಕವಾದ ಹೈನುಗಾರಿಕೆ, ಕೋಳಿ, ಆಡು ಸಾಕಾಣಿಕೆ ಮತ್ತು ಕೃಷಿಯೇತರ ಸ್ವ ಉದ್ಯೋಗಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ. ಸದಸ್ಯ ಜಯಬಂಗೇರ, ಒಕ್ಕೂಟದ ವಗ್ಗ 

Advertisement

Udayavani is now on Telegram. Click here to join our channel and stay updated with the latest news.

Next